Advertisement

ಗಾಯಗೊಂಡ ಧವನ್ ಬದಲಿಗೆ ಏಕದಿನಕ್ಕೆ ಮಯಾಂಕ್ ಆಯ್ಕೆ

10:00 AM Dec 12, 2019 | Team Udayavani |

ಮುಂಬೈ: ವೆಸ್ಟ್ ಇಂಡೀಸ್ ವಿರುದ್ಧದ ಟಿ ಟ್ವೆಂಟಿ ಸರಣಿ ಮುಗಿಯುತ್ತಿದ್ದಂತೆ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ಸರಣಿಗಾಗಿ ಈಗಾಗಲೇ ಪ್ರಕಟಿಸಿದ ತಂಡದಲ್ಲಿ ಸ್ಥಾನ ಪಡೆದಿದ್ದ ಆರಂಭಿಕ ಆಟಗಾರ ಶಿಖರ್ ಧವನ್ ಹೊರಬಿದ್ದಿದ್ದಾರೆ.

Advertisement

ಸಯ್ಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಕಾಲಿಗೆ ಗಾಯ ಮಾಡಿಕೊಂಡಿದ್ದ ಶಿಖರ್ ಧವನ್ ಟಿ ಟ್ವೆಂಟಿ ಸರಣಿಯಿಂದ ಹೊರಬಿದ್ದಿದ್ದರು. ಚುಟುಕು ಸರಣಿಗೆ ಧವನ್ ಬದಲಿಗೆ ಕೇರಳ ಆಟಗಾರ ಸಂಜು ಸ್ಯಾಮ್ಸನ್ ಆಯ್ಕೆಯಾಗಿದ್ದರು.

ಸದ್ಯ ಏಕದಿನ ಸರಣಿಗೆ ಧವನ್ ಬದಲಿಗೆ ಕನ್ನಡಿಗ ಮಯಾಂಕ್ ಅಗರ್ವಾಲ್ 15ರ ಬಳಗವನ್ನು ಕೂಡಿಕೊಳ್ಳಲಿದ್ದಾರೆ. ಸದ್ಯ ತಂಡದಲ್ಲಿ ಮತ್ತೋರ್ವ ಕನ್ನಡಿಗ ಕೆ ಎಲ್ ರಾಹುಲ್ ಇರುವ ಕಾರಣ ಟಿ ಟ್ವೆಂಟಿ ಸರಣಿಯಂತೆ ಏಕದಿನದಲ್ಲೂ ಅವರೇ ಇನ್ನಿಂಗ್ಸ್ ಆರಂಭಿಸುವ ಸಾಧ್ಯತೆ ದಟ್ಟವಾಗಿದೆ.

ಮೂರು ಪಂದ್ಯಗಳ ಏಕದಿನ ಸರಣಿ ಡಿಸೆಂಬರ್ 15ರಿಂದ ಆರಂಭವಾಗಲಿದೆ. ಮೊದಲ ಪಂದ್ಯ ಚೆನ್ನೈನಲ್ಲಿ ನಡೆದರೆ, ಮುಂದಿನೆರಡು ಕ್ರಮವಾಗಿ ವಿಶಾಖಪಟ್ಟಣ ಮತ್ತು ಕಟಕ್ ನಲ್ಲಿ ನಡೆಯಲಿದೆ.

Advertisement

Udayavani is now on Telegram. Click here to join our channel and stay updated with the latest news.

Next