Advertisement

ದೆಹಲಿ, ಉತ್ತರ ಪ್ರದೇಶ ಪೊಲೀಸರು ಹೈದರಾಬಾದ್ ಪೊಲೀಸರನ್ನು ನೋಡಿ ಕಲಿಯಲಿ: ಮಾಯಾವತಿ

09:57 AM Dec 07, 2019 | keerthan |

ಹೈದರಾಬಾದ್: ಪಶುವೈದ್ಯೆಯ ಮೇಲಿನ ಅತ್ಯಾಚಾರ- ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರು ಆರೋಪಿಗಳನ್ನು ಎನ್ ಕೌಂಟರ್ ಮಾಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ ಪ್ರತಿಕ್ರಿಯೆ ನೀಡಿದ್ದು, ಹೈದರಾಬಾದ್ ಪೊಲೀಸರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

Advertisement

ಉತ್ತರ ಪ್ರದೇಶದಲ್ಲಿ ಮಹಿಳೆಯರ ವಿರುದ್ಧದ ಕೃತ್ಯಗಳು ಹೆಚ್ಚಾಗುತ್ತಿವೆ. ಆದರೆ ರಾಜ್ಯ ಸರಕಾರ ಕಣ್ಮುಚ್ಚಿದೆ. ಉತ್ತರ ಪ್ರದೇಶ ಮತ್ತು ದೆಹಲಿ ಪೊಲೀಸರು ಹೈದರಾಬಾದ್ ಪೊಲೀಸರಿಂದ ಸ್ಪೂರ್ತಿ ಪಡೆದು ಕೆಲಸ ಮಾಡಬೇಕು. ಆದರೆ ಇಲ್ಲಿ ಅಪರಾಧಿಗಳಿಗೆ ಆತಿಥ್ಯ ನೀಡಿ ಸಾಕಲಾಗುತ್ತಿದೆ ಎಂದಿದ್ದಾರೆ.

26 ವರ್ಷದ ಪಶುವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಎಲ್ಲಾ ನಾಲ್ವರು ಆರೋಪಿಗಳನ್ನು ಪೊಲೀಸರು ಎನ್ ಕೌಂಟರ್ ನಲ್ಲಿ ಹತ್ಯೆಗೈದಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next