Advertisement

ಮೈಸೂರು ಮೇಯರ್ “ಭಾಗ್ಯ”ಕ್ಕಾಗಿ ಮಾರಾಮಾರಿ, ಹೈಡ್ರಾಮಾ!

12:01 PM Jan 24, 2018 | Team Udayavani |

ಮೈಸೂರು: ಮೈಸೂರು ಮಹಾನಗರ ಪಾಲಿಕೆ ಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಮಾರಾಮಾರಿ ನಡೆದಿದ್ದು, ಭಾರೀ ಹೈಡ್ರಾಮಾ ನಡೆದಿರುವ ಘಟನೆ ಬುಧವಾರ ನಡೆದಿದೆ.

Advertisement

ಮೈಸೂರು ಪಾಲಿಕೆ ಕೌನ್ಸಿಲ್ ಸಭಾಂಗಣದಲ್ಲಿ ಮೇಯರ್ ಚುನಾವಣೆ ನಡೆಯುತ್ತಿದ್ದಂತೆಯೇ ಚುನಾವಣಾಧಿಕಾರಿ ಎದುರಿನಲ್ಲಿಯೇ ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರು ಕೈ, ಕೈ ಮಿಲಾಯಿಸಿಕೊಂಡಿದ್ದಾರೆ.

ಅದಕ್ಕೆ ಕಾರಣ ಕಾಂಗ್ರೆಸ್ ಅಭ್ಯರ್ಥಿ ಭಾಗ್ಯವತಿ ಅವರನ್ನು ಜೆಡಿಎಸ್ ಹೈಜಾಕ್ ಮಾಡಿರುವುದು. ಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಭಾಗ್ಯವತಿ ಅವರು ಬಂಡಾಯ ಎದ್ದು ಅಖಾಡಕ್ಕಿಳಿದಿರುವುದು ಜಟಾಪಟಿಗೆ ಕಾರಣವಾಗಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.

ಚುನಾವಣಾಧಿಕಾರಿ ಅವರು ಪದೇ, ಪದೇ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಸದಸ್ಯರಲ್ಲಿ ಶಾಂತರಾಗಿರುವಂತೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲವಾಗಿತ್ತು. ಈ ಸಂದರ್ಭದಲ್ಲಿ ಧಿಕ್ಕಾರ ಕೂಗಿ ಕಾಂಗ್ರೆಸ್ ಕಾರ್ಯಕರ್ತರು ಪಾಲಿಕೆ ಆವರಣದಲ್ಲಿ ಪ್ರತಿಭಟನೆ ನಡೆಸಿದರು.

Advertisement

Udayavani is now on Telegram. Click here to join our channel and stay updated with the latest news.

Next