Advertisement

ಕಾಂಗ್ರೆಸ್ ‌ಹೈಕಮಾಂಡ್ ಮಹತ್ವದ ಆದೇಶ: ಎಂ.ಬಿ.ಪಾಟೀಲ್ ಗೆ ಪ್ರಚಾರ ಸಾರಥ್ಯ

12:50 PM Jan 25, 2022 | Team Udayavani |

ಬೆಂಗಳೂರು : ಮಾಜಿ ಸಚಿವ ಎಂ.ಬಿ.ಪಾಟೀಲ್ ಅವರನ್ನು ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಿ ಕಾಂಗ್ರೆಸ್ ‌ಹೈಕಮಾಂಡ್ ಮಹತ್ವದ ಆದೇಶ ಹೊರಡಿಸಿದೆ.

Advertisement

ಎಐಸಿಸಿ ಪ್ರಧಾನ‌‌ ಕಾರ್ಯದರ್ಶಿ  ಕೆ.ಸಿ.ವೇಣುಗೋಪಾಲ್ ಮಂಗಳವಾರ ಈ‌ ಮಹತ್ವದ ಆದೇಶ ಹೊರಡಿಸಿದ್ದು, ಚುನಾವಣಾ ವರ್ಷದಲ್ಲಿ ಕಾಂಗ್ರೆಸ್ ಲಿಂಗಾಯಿತ ಮತಬ್ಯಾಂಕ್ ಓಲೈಕೆಗೆ ಮುಂದಾಗಿದೆ.

ಚುನಾವಣಾ ವರ್ಷದಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಮಹತ್ವದ ಸ್ಥಾನವಿದೆ. ಪ್ರಬಲ ಲಿಂಗಾಯಿತ ಸಮುದಾಯಕ್ಕೆ ಸೇರಿದ ಎಂ.ಬಿ.ಪಾಟೀಲ್ ಗೆ ಈ ಸ್ಥಾನ ನೀಡಿರುವುದರಿಂದ ಈಗ ಉತ್ತರ ಕರ್ನಾಟಕ ಭಾಗದಲ್ಲಿ ಕಾಂಗ್ರೆಸ್ ಗೆ ಚಲನಶಕ್ತಿ ದೊರೆತಂತಾಗಿದೆ.

ಸಮನ್ವಯ :
ಮಾಜಿ ಸಿಎಂ ಸಿದ್ದರಾಮಯ್ಯ ಆಪ್ತ ವಲಯದಲ್ಲಿರುವ ಎಂ.ಬಿ.ಪಾಟೀಲ್ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಮೊದಲಿನಿಂದಲೂ ಎಣ್ಣೆ ಶೀಗೆಕಾಯಿ ಸಂಬಂಧ ಹೊಂದಿದ್ದಾರೆ. ಲಿಂಗಾಯಿತ ಪ್ರತ್ಯೇಕ ಧರ್ಮ‌ ಹೋರಾಟದಲ್ಲಿ ಪಾಟೀಲ್ ಮುಂಚೂಣಿಯಲ್ಲಿದ್ದರು. ಆದರೆ ಈ ಹೋರಾಟಕ್ಕೆ ಕಾಂಗ್ರೆಸ್ ಕೈ ಹಾಕಬಾರದಿತ್ತು ಎಂದು ಶಿವಕುಮಾರ್ ರಂಬಾಪುರಿ ಶ್ರೀಗಳ ಎದುರು ಹೇಳಿ ಎಂ.ಬಿ.ಪಾಟೀಲ್ ಹಾಗೂ ಸಿದ್ದರಾಮಯ್ಯ ‌ಕೆಂಗಣ್ಣಿಗೆ ಗುರಿಯಾಗಿದ್ದರು.

ಶಿವಕುಮಾರ್ ಅಧ್ಯಕ್ಷ ರಾದ ಬಳಿಕ ಪಕ್ಷದ ಚಟುವಟಿಕೆಗಳಿಂದ ಬಹುಪಾಲು ದೂರ ಉಳಿದಿದ್ದ ಎಂ.ಬಿ.ಪಾಟೀಲ್ ಅವರಿಗೆ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನ ನೀಡಲಾಗಿದ್ದು ಕಾಂಗ್ರೆಸ್ ಒಳ ರಾಜಕೀಯದ ಸ್ವರೂಪ ಇನ್ನಷ್ಟು ಬಿಗಡಾಯಿಸುತ್ತದೆಯೇ ? ಅಥವಾ ಎಲ್ಲರೂ ಒಟ್ಟಿಗೆ ಚುನಾವಣೆ ಎದುರಿಸುತ್ತಾರೆಯೋ ಎಂಬ‌ ಕುತೂಹಲ ಸೃಷ್ಟಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next