Advertisement

ಎಂ.ಬಿ. ಪಾಟೀಲ್, ಪ್ರಿಯಾಂಕ್‌ ಖರ್ಗೆಗೆ ಹೆಚ್ಚುವರಿ ಖಾತೆ‌ ಹಂಚಿಕೆ

12:59 AM Jun 01, 2023 | Team Udayavani |

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಬಳಿ ಇದ್ದ ಎರಡು ಪ್ರಮುಖ ಖಾತೆಗಳನ್ನು ಇಬ್ಬರು ಸಚಿವರಿಗೆ ಹೆಚ್ಚುವರಿಯಾಗಿ ಹಂಚಿಕೆ ಮಾಡಿದ್ದಾರೆ. ಈ ಸಂಬಂಧ ಬುಧವಾರ ಗೆಜೆಟ್‌ ಅಧಿಸೂಚನೆ ಹೊರಡಿಸಲಾಗಿದೆ. ಮುಖ್ಯಮಂತ್ರಿಯವರು ಹಣಕಾಸು, ಸಂಪುಟ ವ್ಯವಹಾರ, ಸಿಬಂದಿ ಮತ್ತು ಆಡ ಳಿತ ಸುಧಾರಣೆ, ಗುಪ್ತದಳ, ವಾರ್ತಾ ಇಲಾಖೆ, ಐಟಿ-ಬಿಟಿ ಮೂಲ ಸೌಲಭ್ಯ ಇಲಾಖೆ ಜತೆಗೆ ಯಾರಿಗೂ ಹಂಚಿಕೆಯಾ ಗದ ಖಾತೆಗಳನ್ನು ಇಟ್ಟುಕೊಂಡಿದ್ದರು.

Advertisement

ಆದರೆ ಈಗ ತಮ್ಮ ಬಳಿ ಇದ್ದ ಮೂಲ ಸೌಲಭ್ಯ ಇಲಾಖೆಯನ್ನು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್‌ಗೆ ಹಾಗೂ ಐಟಿ-ಬಿಟಿ ಖಾತೆಯನ್ನು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಅವರಿಗೆ ಹೆಚ್ಚು ವರಿಯಾಗಿ ಹಂಚಿಕೆ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next