Advertisement

ಎಲೆಕ್ಷನ್ ಬಾಂಡ್ ಪ್ರಕರಣದಲ್ಲಿ ಪ್ರಧಾನಿ ರಾಜೀನಾಮೆ ಕೊಡಬೇಕಲ್ವಾ?: ಎಂ.ಬಿ.ಪಾಟೀಲ್ ಪ್ರಶ್ನೆ

06:20 PM Sep 25, 2024 | sudhir |

ವಿಜಯಪುರ: ಕೇಂದ್ರ ಸರ್ಕಾರದ ಚುನಾವಣಾ ಬಾಂಡ್ ಪ್ರಕರಣದಲ್ಲೂ ಸುಪ್ರೀಂ ಕೋರ್ಟ್ ಟಿಪ್ಪಣೆ ಮಾಡಿದೆ. ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕಾದರೆ, ಚುನಾವಣಾ ಬಾಂಡ್ ಪ್ರಕರಣದಲ್ಲಿ ಪ್ರಧಾನಿ ಮೋದಿ ಅವರೂ ರಾಜೀನಾಮೆ ಕೊಡಬೇಕಲ್ವಾ ಎಂದು ಬೃಹತ್ ಕೈಗಾರಿಕೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್ ಪ್ರಶ್ನಿಸಿದರು.

Advertisement

ಬುಧವಾರ ಹರಿಯಾಣದ ಚುನಾವಣಾ ಪ್ರಚಾರ ಸಭೆಯಲ್ಲಿ ಪ್ರಧಾನಿ ಮೋದಿ ಅವರು ಮುಡಾ ಪ್ರಕರಣ ಮತ್ತು ಸಿಎಂ ಸಿದ್ದರಾಮಯ್ಯನವರ ವಿಷಯ ಪ್ರಸ್ತಾಪಿಸಿದ ಬಗ್ಗೆ ಪ್ರತಿಕ್ರಿಯಿಸಿದ ಎಂ.ಬಿ.ಪಾಟೀಲ್, ಚುನಾವಣಾ ಬಾಂಡ್ ಪ್ರಕರಣದಲ್ಲೂ ಸುಪ್ರೀಂ ಕೋರ್ಟ್ ಇದೇ ರೀತಿ ಟಿಪ್ಪಣೆ ಮಾಡಿದೆ. ಮತ್ತೆ ನೀವು ಯಾವ ರೀತಿ ನಡೆದುಕೊಳ್ಳುತ್ತೀರಿ?. ಈ ವಿಚಾರದಲ್ಲಿ ಪ್ರಧಾನಿ ಮೋದಿಯವರು ಕೂಡ ರಾಜೀನಾಮೆ ಕೊಡಬೇಕಲ್ವಾ?. ರಾಜ್ಯದಲ್ಲಿ ಬಿಜೆಪಿಯವರು ಏನೇನು ಅನಾಹುತ ಮಾಡಿದ್ದಾರೆಂದು ಮೋದಿ ಅವರಿಗೆ ಗೊತ್ತಿಲ್ಲ. ಬಿಜೆಪಿಯ ಎಲ್ಲರೂ ಜಾಮೀನಿನ ಮೇಲಿದ್ದಾರೆ. ನಮ್ಮ ಪ್ರಕರಣದಲ್ಲಿ ಇನ್ನೂ ಪ್ರಾಥಮಿಕ ತನಿಖೆಯೂ ಕೂಡ ಆಗಿಲ್ಲ ಎಂದರು.

ಅಲ್ಲದೇ, ಸಿಎಂ ಸಿದ್ದರಾಮಯ್ಯ ರಾಜಿನಾಮೆಗೆ ಒತ್ತಾಯಿಸಲ್ಲ ಎಂಬ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಕುಮಾರಸ್ವಾಮಿ ತಾವು ರಾಜೀನಾಮೆ ಕೊಡಬೇಕು ಆಗುತ್ತೆ ಎಂದು ಈ ರೀತಿ ಹೇಳುತ್ತಿದ್ದಾರೆ. ಸಿಎಂ ರಾಜೀನಾಮೆಗೆ ಆಗ್ರಹಿಸುವ ಬಿಜೆಪಿಯವರು ಮೊದಲು ಕುಮಾರಸ್ವಾಮಿ ರಾಜಿನಾಮೆಯನ್ನು ಕೇಳಲಿ. ಕುಮಾರಸ್ವಾಮಿ, ಶಶಿಕಲಾ ಜೊಲ್ಲೆ, ಮುರುಗೇಶ್ ನಿರಾಣಿ, ಜನಾರ್ದನ ರೆಡ್ಡಿ ವಿರುದ್ಧ ಪ್ರಾಥಮಿಕ ತನಿಖೆಯಾಗಿದೆ. ಸಿದ್ದರಾಮಯ್ಯ ಅವರದ್ದು ತಪ್ಪು ಏನಿದೆ. ಪ್ರಾಥಮಿಕ ತನಿಖೆಯನ್ನು ನಾವು ಪ್ರಶ್ನೆ ಮಾಡುತ್ತೇವೆ. ಯಾವುದಾದರೂ ದಾಖಲೆಗೆ ಸಿದ್ದರಾಮಯ್ಯನವರ ಸಹಿ ಇದೆಯೇ?, ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ

ಇದನ್ನೂ ಓದಿ: Shivamogga: ಪ್ರಾಯೋಗಿಕ ಸ್ಫೋಟ: ಇಬ್ಬರ ವಿರುದ್ಧ ಎನ್‌ಐಎ ಚಾರ್ಜ್‌ಶೀಟ್‌

Advertisement

Udayavani is now on Telegram. Click here to join our channel and stay updated with the latest news.

Next