Advertisement

ಪ್ರಚೋದನೆಗೆ ಒಳಗಾಗದಿರಿ:  ಎಂ.ಬಿ. ಪಾಟೀಲ್‌ 

09:37 PM Feb 12, 2022 | Team Udayavani |

ಬೆಂಗಳೂರು: ಯಾವುದೇ ರೀತಿಯ ಪ್ರಚೋದನೆಗೆ ಒಳಗಾಗದೆ ನಿಮ್ಮ ಭವಿಷ್ಯ ರೂಪಿಸಿಕೊಳ್ಳಿ ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್‌ ಪ್ರಚಾರ ಸಮಿತಿ ಅಧ್ಯಕ್ಷ  ಎಂ.ಬಿ.ಪಾಟೀಲ್‌  ಅವರು ವಿದ್ಯಾರ್ಥಿಗಳಲ್ಲಿ ಮನವಿ ಮಾಡಿದ್ದಾರೆ.

Advertisement

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಹಿಜಾಬ್‌ ಮತ್ತು ಕೇಸರಿ ಶಾಲು ವಿಚಾರದಲ್ಲಿ ನ್ಯಾಯಾಲಯದ ತೀರ್ಪನ್ನು ಗೌರವಿಸುವಂತೆ ವಿದ್ಯಾರ್ಥಿಗಳು ಮತ್ತು  ಪೋಷಕರಲ್ಲಿ  ವಿನಂತಿಸಿದ್ದಾರೆ.

ರಾಜ್ಯದಲ್ಲಿ ಇತ್ತೀಚೆಗೆ ನಡೆಯುತ್ತಿರುವ ಬೆಳವಣಿಗೆಗಳು ಎಳೆಯ ಮಕ್ಕಳನ್ನು ಬೀದಿಯಲ್ಲಿ ನಿಲ್ಲಿಸಿ,ಆಶಾಂತಿ ಸೃಷ್ಟಿಸುವ ಪ್ರಯತ್ನವನ್ನು ಕೆಲವು ಸಂಘಟನೆಗಳ ಮಾಡುತ್ತಿದ್ದು, ಇದು ಬೇಸರ ತರಿಸುವ ಸಂಗತಿಯಾಗಿದೆ. ಕಳೆದೆರಡು ವರ್ಷಗಳಿಂದ ಕೋವಿಡ್‌ ಹಿನ್ನೆಲೆಯಲ್ಲಿ ಸರಿಯಾಗಿ ತರಗತಿಗಳು ನಡೆಸಲು ಸಾಧ್ಯವಾಗಿಲ್ಲ. ಆನ್‌ಲೈನ್‌ ಹಿನ್ನೆಲೆಯಲ್ಲಿ ಅನೇಕ ಬಡ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಆ ಹಿನ್ನೆಲೆಯಲ್ಲಿ ಪ್ರೀತಿ-ಸ್ನೇಹದಿಂದ ಎಲ್ಲರೂ ಸಾಗುವಂತೆ ಮನವಿ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next