Advertisement

ಬಿಎಸ್ ವೈ ಅವರನ್ನು ಘನತೆ, ಗೌರವದಿಂದ ನಡೆಸಿಕೊಳ್ಳಬೇಕು: ಸಿಎಂ ಪರ ಎಂ.ಬಿ.ಪಾಟೀಲ ಬ್ಯಾಟಿಂಗ್

03:33 PM Jul 19, 2021 | Team Udayavani |

ವಿಜಯಪುರ : ಕಾಂಗ್ರೆಸ್ ಪಕ್ಷದ‌ ಲಿಂಗಾಯತ ಸಮುದಾಯದ ಹಿರಿಯ ಶಾಸಕ‌ ಎಂ.ಬಿ.ಪಾಟೀಲ‌ ಮುಖ್ಯಮಂತ್ರಿ ಯಡಿಯೂರಪ್ಪ ಪರ ಬ್ಯಾಟಿಂಗ್ ಮಾಡಿದ್ದಾರೆ.

Advertisement

ತಮ್ಮ ಟ್ವಿಟರ್ ಖಾತೆಯಲ್ಲಿ ,ಲಿಂಗಾಯತ ಸಮುದಾಯದ ಧೀಮಂತ ನಾಯಕರಾಗಿರುವ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದ ಅಧಿಕಾರದಿಂದ ಪದಚ್ಯುತಿ ಮಾಡಕೂಡದು. ಒಂದೊಮ್ಮೆ ಬಿಜೆಪಿ ಇಂಥ ಕೆಲಸಕ್ಕೆ ಕೈ ಹಾಕಿದರೆ ಬಿಜೆಪಿ ವರಿಷ್ಠರು ಖಂಡಿತವಾಗಿ ಲಿಂಗಾಯತರ ಅವಕೃಪೆಗೆ ಗುರಿ ಆಗಲಿದ್ದಾರೆ ಎಂದೂ ಎಚ್ಚರಿಸಿದ್ದಾರೆ.

ಯಡಿಯೂರಪ್ಪ ಅವರ ವಯಸ್ಸು, ಪಕ್ಷ ಹಾಗೂ‌ ನಾಡಿಗೆ ನೀಡಿದ ಕೊಡುಗೆಯನ್ನು ಪರಿಗಣಿಸಿ, ಅವರನ್ನು ಘನತೆ, ಗೌರವ, ಮರ್ಯಾದೆಯಿಂದ ನಡೆಸಿಕೊಳ್ಳಬೇಕು ಎಂಬುದು ನನ್ನ ವೈಯಕ್ತಿಕ ಅನಿಸಿಕೆ ಎಂದೂ ಲಿಂಗಾಯತ ಸಮುದಾಯದ‌ ಮುಂಚೂಣಿ ನಾಯಕರೂ ಆಗಿರುವ ಎಂ.ಬಿ.ಪಾಟೀಲ ಬಿಜೆಪಿ ವರಿಷ್ಠರಿಗೆ ಸಲಹೆ ನೀಡಿದ್ದಾರೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next