Advertisement
ಈ ವೈದ್ಯ ವಿದ್ಯಾರ್ಥಿ ಅಲ್ಲಿನ ಬಹುಮಹಡಿ ಕಟ್ಟಡದ ಮೇಲಿಂದ ಬಿದ್ದು ಸಾವನ್ನಪ್ಪಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆಯಾದರೂ ಈ ಕುರಿತಾಗಿರುವ ಖಚಿತ ಮಾಹಿತಿ ಇನ್ನೂ ಲಭ್ಯವಾಗಿಲ್ಲ.
Related Articles
Advertisement
ಅಮರ್ ಸಾವಿನ ಕುರಿತು ಕಾಲೇಜಿನ ಮುಖ್ಯಸ್ಥರು ಏಜೆನ್ಸ್ಯವರ ಗಮನಕ್ಕೆ ತಂದಿದ್ದು, ಅವರು ವಿದ್ಯಾರ್ಥಿಯ ಕುಟುಂಬದವರಿಗೆ ತಿಳಿಸಿದ್ದಾನೆ. ವಿದ್ಯಾರ್ಥಿ ಸಾವನ್ನಪ್ಪಿ ನಾಲ್ಕು ದಿನಗಳು ಕಳೆದರೂ ಈವರೆಗೆ ಸರಿಯಾದ ಮಾಹಿತಿ ಸಿಗದೇ ಅಮರ್ ಕುಟುಂಬದವರು ಕಣ್ಣೀರು ಹಾಕುತ್ತಿದ್ದಾರೆ. ತಮ್ಮ ಮಗನ ಸಾವು ಹೇಗಾಯಿತು? ಮೃತದೇಹ ಎಲ್ಲಿದೆ? ಎಂಬಿತ್ಯಾದಿ ಮಾಹಿತಿಗಳನ್ನು ಸಂಗ್ರಹಿಸಲು ಅಮರ್ ಹೆತ್ತವರು ಇದೀಗ ಒದ್ದಾಡುತ್ತಿದ್ದಾರೆ. ನಮಗೆ ನಮ್ಮ ಪುತ್ರನ ಸಾವಿನ ಬಗ್ಗೆ ತಿಳಿಯಬೇಕು. ಮೃತದೇಹವನ್ನು ಇಲ್ಲಿಗೆ ತರಿಸಿಕೊಡಬೇಕು. ಇದಕ್ಕಾಗಿ ಸರ್ಕಾರ ನೆರವಿಗೆ ಬರಬೇಕು ಎಂದು ಅವರು ಈ ಮೂಲಕ ಮನವಿ ಮಾಡಿಕೊಂಡಿದ್ದಾರೆ.