Advertisement

ವಿದ್ಯಾರ್ಥಿಗಳೇ ಎಚ್ಚರದಿಂದ ಇರಿ; ಕೆನಡಾದಲ್ಲಿರುವ ಭಾರತೀಯರಿಗೆ ಕೇಂದ್ರದ ಸೂಚನೆ

07:15 PM Sep 23, 2022 | Team Udayavani |

ನವದೆಹಲಿ: ಕೆನಡಾದಲ್ಲಿ ಇತ್ತೀಚಿನ ದಿನಗಳಲ್ಲಿ ಭಾರತೀಯರ ವಿರುದ್ಧ ಜನಾಂಗೀಯ ದ್ವೇಷದ ಘಟನೆಗಳು ಹೆಚ್ಚುತ್ತಿವೆ. ಈ ಹಿನ್ನೆಲೆಯಲ್ಲಿ ಆ ದೇಶದಲ್ಲಿ ವಾಸಿಸುತ್ತಿರುವ ಭಾರತೀಯ ಮೂಲದ ಪ್ರಜೆಗಳು ಮತ್ತು ವಿದ್ಯಾರ್ಥಿಗಳು ಎಚ್ಚರಿಕೆಯಿಂದ ಇರಬೇಕು ಎಂದು ಕೇಂದ್ರ ಸರ್ಕಾರ ಶುಕ್ರವಾರ ಎಚ್ಚರಿಕೆ ನೀಡಿದೆ.

Advertisement

ಕೆಲ ದಿನಗಳ ಹಿಂದೆ ಖಲಿಸ್ತಾನ ಪರವಿರುವ ಕೆಲವು ಪ್ರತ್ಯೇಕತಾವಾದಿಗಳು ಕೆನಡಾದಲ್ಲಿ ಜನಮತಗಣನೆ ನಡೆಸಿದ್ದಾರೆ. ಅದನ್ನು ಹಾಸ್ಯಾಸ್ಪದ ಎಂದು ಕೇಂದ್ರ ಖಂಡಿಸಿದೆ. ಅಲ್ಲಿ ನಡೆಯುತ್ತಿರುವ ಹಲ್ಲೆಗಳ ವಿರುದ್ಧ ತೀವ್ರ ಆಕ್ಷೇಪಣೆ ವ್ಯಕ್ತಪಡಿಸಿರುವ ಕೇಂದ್ರ, ಇಂತಹ ದಾಳಿಕೋರರ ವಿರುದ್ಧ ಕೆನಡಾದಲ್ಲಿ ಇದುವರೆಗೆ ಕ್ರಮ ತೆಗೆದುಕೊಂಡಿಲ್ಲ. ಪರಸ್ಪರ ಸ್ನೇಹಿತರಾಷ್ಟ್ರಗಳಲ್ಲಿ ಇಂತಹ ಘಟನೆಗಳಿಗೆ ಅವಕಾಶ ಕೊಡುವುದು ತರವಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದೆ.

ಜನಾಂಗೀಯ ದ್ವೇಷದ ಘಟನೆಗಳು ನಡೆದಲ್ಲಿ ಒಟ್ಟಾವ, ಟೊರಾಂಟೋ, ವಾಂಕೂವರ್‌ನಲ್ಲಿರುವ ಭಾರತದ ಹೈಕಮಿಷನ್‌ ಅಥವಾ ದೂತಾವಾಸ ಕಚೇರಿಗಳಿಗೆ ದೂರು ನೀಡಬೇಕು ಎಂದು ಸಲಹೆ ಮಾಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next