Advertisement

ಪಶುವೈದ್ಯಕೀಯ ಕಾಲೇಜಿನ ಆರ್‌ಟಿ-ಪಿಸಿಆರ್ ಉಪಕರಣಗಳು ಆರೋಗ್ಯ ಇಲಾಖೆ ಲ್ಯಾಬ್‌ಗೆ ನೀಡಲು ಕ್ರಮ

03:24 PM May 06, 2020 | keerthan |

ಬೀದರ್: ಕೋವಿಡ್-19 ಪತ್ತೆ ಹಚ್ಚುವಲ್ಲಿ ಲ್ಯಾಬ್‌ಗಳ ಪಾತ್ರ ಪ್ರಮುಖವಾಗಿದ್ದು, ಪಶುವೈದ್ಯಕೀಯ ಕಾಲೇಜಿನಲ್ಲಿ ಲಭ್ಯವಿದ್ದ ಆರ್‌ಟಿ-ಪಿಸಿಆರ್ ಉಪಕರಣಗಳು ಆರೋಗ್ಯ ಇಲಾಖೆಯ ಲ್ಯಾಬ್‌ಗಳಿಗೆ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ಅವರು ತಿಳಿಸಿದ್ದಾರೆ.

Advertisement

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ರಾಜ್ಯದಲ್ಲಿ ಕೋವಿಡ್-19 ಸೊಂಕು ಹರಡುವುದನ್ನು ತಡೆಗಟ್ಟಲು ರಾಜ್ಯ ಸರ್ಕಾರ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದ್ದು ರೋಗ ಪತ್ತೆ ಹಚ್ಚುವಲ್ಲಿ ಬಳಸಲಾಗುವ ಆರ್.ಟಿ ಪಿಸಿಆರ್  ಉಪಕರಣಗಳು ಪಶುಸಂಗೋಪನೆ ಇಲಾಖೆಯ ಮತ್ತು ಪಶುವೈದ್ಯಕೀಯ ವಿಶ್ವವಿದ್ಯಾಲಯಗಳ ಲ್ಯಾಬ್‌ಗಳಲ್ಲಿ ಲಭ್ಯವಿದ್ದು ಉಪಕರಣಗಳನ್ನು ಸಹ ಈ ಸಂಕಷ್ಟದ ಪರಿಸ್ಥಿತಿಯಲ್ಲಿ ಬಳಸಿಕೊಳ್ಳಲು ಆರೋಗ್ಯ ಇಲಾಖೆಗೆ ಪತ್ರ ಬರೆಯಲಾಗಿತ್ತು. ಸದ್ಯ ಈ ಉಪಕರಣಗಳನ್ನು ಕೊವಿಡ್-19 ಪತ್ತೆಗೆ ಬಳಸಿಕೊಳ್ಳಲು ಸರ್ಕಾರ ಆದೇಶ ಹೊರಡಿಸಿದೆ. ಇದರಿಂದಾಗಿ ಸೋಂಕು ಪತ್ತೆಗೆ ಮತ್ತಷ್ಟು ವೇಗ ದೊರೆಯಲಿದೆ ಎಂದು ಅವರು ತಿಳಿಸಿದ್ದಾರೆ.

ಹೆಬ್ಬಾಳ ಪಶುವೈದ್ಯಕೀಯ ಕಾಲೇಜಿನಲ್ಲಿ ಲಭ್ಯವಿದ್ದ 2 ಆರ್.ಟಿ ಪಿಸಿಆರ್ ಉಪಕರಣಗಳನ್ನು ಆರೋಗ್ಯ ಇಲಾಖೆಗೆ ನೀಡಲಾಗಿದೆ. ಕೃಷಿ ವಿಶ್ವವಿದ್ಯಾಲಯ ಬೆಂಗಳೂರು ಮತ್ತು ಧಾರವಾಡ, ಕರ್ನಾಟಕ ಡಿ.ಎನ್.ಎ ಸಂಶೋಧನಾ ಸಂಸ್ಥೆ ಧಾರವಾಡ ಹಾಗೂ ಧಾರವಾಡದ ಕೃಷಿ ಜೈವಿಕ ತಂತ್ರಜ್ಞಾನ ಸಂಸ್ಥೆಯ ಉಪಕರಣಗಳನ್ನು ಸಹ ಕೊವಿಡ್-19 ಪತ್ತೆಗೆ ಬಳಸಿಕೊಳ್ಳಲು ಐ.ಸಿ.ಎಂ.ಆರ್ ನಿಯಮಾವಳಿಗಳ ಪ್ರಕಾರ ಉಪಕರಣಗಳನ್ನು ಹಸ್ತಾಂತರಿಸಲಾಗಿದೆ.

ಕೋವಿಡ್-19ರ ಪರೀಕ್ಷೆ ಜೈವಿಕ ಸುರಕ್ಷತಾ ಮಟ್ಟ-2ರಲ್ಲಿ ಮಾಡ ಬೇಕಾಗಿರುವುದರಿಂದ ಸಾಕಷ್ಟು ಎಚ್ಚರವಹಿಸಿ ಕಾರ್ಯನಿರ್ವಹಿಸಬೇಕಾಗುತ್ತದೆ. ಸದ್ಯ ಈ ಎಲ್ಲ ಉಪಕರಣಗಳನ್ನು ಬಳಸಿಕೊಂಡಿದ್ದಾದಲ್ಲಿ ಅಂದಾಜು ಸುಮಾರು 10,000 ಟೆಸ್ಟಗಳನ್ನು ಮಾಡಬಹುದಾಗಿದೆ. ಅಲ್ಲದೆ ಉಪಕರಣಗಳ ಮೇಲೆ ಕಾರ್ಯ ನಿರ್ವಹಿಸುವ ನುರಿತ ತಂತ್ರಜ್ಞರನ್ನು ಈ ಕೆಲಸಕ್ಕೆ ನಿಯೋಜಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next