Advertisement

ಬೆಳಗಾವಿ- ಬಾಗಲಕೋಟೆ ಪಾದಯಾತ್ರೆ:  ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ನಾಯಕರ ಸಭೆ

10:00 AM Nov 04, 2019 | Team Udayavani |

ಬೆಂಗಳೂರು: ನೆರೆ ಸಂತ್ರಸ್ಥರ ಸಮಸ್ಯೆ ಪರಿಹಾರಕ್ಕೆ ಒತ್ತಾಯಿಸಿ ಬೆಳಗಾವಿಯಿಂದ ಬಾಗಲಕೋಟೆಗೆ ಪಾದಯಾತ್ರೆ ನಡೆಸಲು ಯೋಜನೆ ರೂಪಿಸಿರುವ ರಾಜ್ಯ ಕೈ ನಾಯಕರು ಇಂದು ಸಭೆ ಸೇರಿ ಚರ್ಚೆ ನಡೆಸಿದರು.

Advertisement

ನಗರದ ಕೆಪಿಸಿಸಿ ಕಚೇರಿಯಲ್ಲಿ ಸಭೆ ಸೇರಿದ ಕಾಂಗ್ರೆಸ್ ಮುಖಂಡರು ಪಾದಯಾತ್ರೆಯ ರೂಪುರೇಷೆ ಕುರಿತಂತೆ ಮಾತುಕತೆ ನಡೆಸಿದರು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಡಿಸಿಎಂ ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಮಾಜಿ ಸಚಿವ ಎಂ.ಬಿ.ಪಾಟೀಲ್, ಹೆಚ್.ಕೆ ಪಾಟೀಲ್, ಚೆಲುವರಾಯಸ್ವಾಮಿ, ಆರ್.ಬಿ. ತಿಮ್ಮಾಪೂರ, ಮೇಲ್ಮನೆ ಪ್ರತಿಪಕ್ಷ ನಾಯಕ ‌ಎಸ್.ಆರ್.ಪಾಟೀಲ್, ನಂಜಯ್ಯನ ಮಠ, ಬಾಲಕೃಷ್ಣ, ವೀರ್ ಕುಮಾರ್ ಪಾಟೀಲ್,ಹೆಚ್.ವೈ.ಮೇಟಿ ಸೇರಿದಂತೆ  ಬೆಳಗಾವಿ,ಬಾಗಲಕೋಟೆ ಕಾಂಗ್ರೆಸ್ ಮುಖಂಡರು ಭಾಗಿಯಾಗಿ ಚರ್ಚೆ ನಡೆಸಿದರು.

Advertisement

Udayavani is now on Telegram. Click here to join our channel and stay updated with the latest news.

Next