Advertisement

ವರದಿಗಳು ಏಕಪಕ್ಷೀಯವಾಗಿ ಇರಬಾರದು…ಮಾಧ್ಯಮ ಕ್ಷೇತ್ರಕ್ಕೆ ಅದಾನಿ ಪ್ರವೇಶ?

01:55 PM Sep 22, 2021 | Team Udayavani |

ಹೊಸದಿಲ್ಲಿ: ಇಂಧನ, ಮೂಲಸೌಕರ್ಯ  ಕ್ಷೇತ್ರಗಳಲ್ಲಿ ಹಲವು ಉದ್ದಿಮೆಗಳನ್ನು ಹೊಂದಿರುವ ಅದಾನಿ ಗ್ರೂಪ್‌ ಶೀಘ್ರವೇ ಮಾಧ್ಯಮ ಕ್ಷೇತ್ರ ಪ್ರವೇಶಿಸಲಿದೆ.

Advertisement

ಅದಕ್ಕೆ ಪೂರಕವಾಗಿ ಹೊಸದಿಲ್ಲಿಯಲ್ಲಿ ಮಂಗಳವಾರ ಮಾತನಾಡಿದ ಸಂಸ್ಥೆಯ ಅಧ್ಯಕ್ಷ ಗೌತಮ್‌ ಅದಾನಿ, ಮಾಧ್ಯಮ ಸ್ವಾತಂತ್ರ್ಯದ ಹೆಸರಿನಲ್ಲಿ ಪ್ರಕಟವಾಗುವ ವರದಿಗಳು ಏಕಪಕ್ಷೀಯವಾಗಿ ಇರಬಾರದು. ದೇಶದ ಘನತೆಯೊಂದಿಗೆ ರಾಜಿ ಮಾಡಿಕೊಂಡು ಟೀಕೆ ಮಾಡಬಾರದು ಎಂದು ಹೇಳಿದ್ದಾರೆ.

ಟಿ.ವಿ.ಮತ್ತು ಡಿಜಿಟಲ್‌ ಮಾಧ್ಯಮ ಕ್ಷೇತ್ರದಲ್ಲಿ ಸಂಸ್ಥೆ ಹೂಡಿಕೆ ಮಾಡುವ ಸಾಧ್ಯತೆಗಳಿದ್ದು, ಹೊಸ ಯೋಜನೆಗೆ ಪೂರಕವಾಗಿ ಹಿರಿಯ ಪತ್ರಕರ್ತ ಸಂಜಯ ಪುಗಾಲಿಯಾ ಅವರನ್ನು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ಪ್ರಧಾನ ಸಂಪಾದಕರನ್ನಾಗಿ ನೇಮಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next