Advertisement

Task Force: ವೈದ್ಯಕೀಯ ವಿದ್ಯಾರ್ಥಿಗಳ ಆತ್ಮಹತ್ಯೆ: ಸಮಸ್ಯೆ ಬಗೆಹರಿಸಲು ಕಾರ್ಯಪಡೆ

10:13 PM Feb 27, 2024 | Team Udayavani |

ನವದೆಹಲಿ: ವೈದ್ಯಕೀಯ ವಿದ್ಯಾರ್ಥಿಗಳು ಖನ್ನತೆಗೆ ಜಾರುತ್ತಿರುವುದು, ಆತ್ಮಹತ್ಯೆಗೆ ಶರಣಾಗುತ್ತಿರುವಂಥ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಸಮಸ್ಯೆಗಳನ್ನು ಬಗೆಹರಿಸಿ, ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ಸುಧಾರಿಸಲು ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‌ಎಂಸಿ)ವು ರಾಷ್ಟ್ರೀಯ ಕಾರ್ಯಪಡೆ ರಚಿಸಿದೆ.

Advertisement

ನಿಮ್ಹಾನ್ಸ್‌ನ ಮನೋವೈದ್ಯ ಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಡಾ.ಎಂ ಸುರೇಶ್‌ ಅವರು ಕಾರ್ಯಪಡೆ ಅಧ್ಯಕ್ಷರಾಗಿದ್ದಾರೆ. ವೈದ್ಯಕೀಯ ವಿದ್ಯಾರ್ಥಿಗಳು ಖನ್ನತೆಗೆ ಜಾರುತ್ತಿರುವುದರ ಹಿಂದಿನ ಅಂಶಗಳನ್ನು ವಿಶ್ಲೇಷಿಸಿ, ದತ್ತಾಂಶಗಳನ್ನು ಪರಿಗಣಿಸಿ, ಮಾನಸಿಕ ಆರೋಗ್ಯ ಸುಧಾರಿಸಲು ಪುರಾವೆ ಆಧಾರಿತ ತಂತ್ರಗಳನ್ನು ಈ ಕಾರ್ಯಪಡೆ ಪ್ರಸ್ತಾಪಿಸಲಿದೆ ಎಂದು ಆಯೋಗ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next