Advertisement

ವೈದ್ಯೆಯ ಅತ್ಯಾಚಾರ, ಕೊಲೆ: ಪ್ರತಿಭಟನೆ ಮಾಡುತ್ತಿದ್ದ ವೇಳೆ ಚರಂಡಿಗೆ ಬಿದ್ದ ವಿದ್ಯಾರ್ಥಿಗಳು

09:45 AM Dec 05, 2019 | Team Udayavani |

ಬಳ್ಳಾರಿ: ಹೈದರಬಾದ್ ನಲ್ಲಿ ನಡೆದ ವೈದ್ಯೆಯ ಅತ್ಯಾಚಾರ, ಕೊಲೆ ಖಂಡಿಸಿ ನಗರದ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಆಯತಪ್ಪಿ ಚರಂಡಿಯೊಳಕ್ಕೆ ಬಿದ್ದು 15 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ನಡೆದಿದೆ.

Advertisement

ಡಿಸಿ ಕಚೇರಿಯ ಹೊರ ಭಾಗದಲ್ಲಿ ಸಾವಿರಾರು ಸಂಖ್ಯೆಯಲ್ಲಿ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.ಹಲವು ವಿದ್ಯಾರ್ಥಿಗಳು ಚರಂಡಿ ಮೇಲಿನ ಸ್ಲ್ಯಾಬ್ ಮೇಲೆ ನಿಂತಿದ್ದಾಗ ಏಕಾಏಕಿ ಸ್ಲ್ಯಾಬ್ ಕುಸಿದಿದೆ. ಪರಿಣಾಮವಾಗಿ ಎಲ್ಲಾ ವಿದ್ಯಾರ್ಥಿಗಳು ಚರಂಡಿಯೊಳಕ್ಕೆ ಬಿದ್ದಿದ್ದಾರೆ.

15ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ತೀವ್ರವಾಗಿ ಗಾಯವಾಗಿದ್ದು, ವಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಮಹಾನಗರ ಪಾಲಿಕೆಯ ಎಇ ಖಾಜಾಮೋಹಿನುದ್ದೀನ್ ಸೇರಿ ಇತರೆ ಅಧಿಕಾರಿಗಳುಈ ವೇಳೆ ಇದ್ದರು ಇದ್ದರು.

ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಸ್ಥಳಾಕ್ಕಗಮಿಸಿ ಪಾಲಿಕೆಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

Advertisement

Udayavani is now on Telegram. Click here to join our channel and stay updated with the latest news.

Next