Advertisement

ನೆರವಿನ ನಿರೀಕ್ಷೆಯಲ್ಲಿ ಅಸಹಾಯಕ ಗಾಯಾಳು ಯುವಕ ರಾಜೇಶ್‌ ಶೆಟ್ಟಿ

02:15 AM Jul 25, 2018 | Team Udayavani |

ಉಡುಪಿ: ಕಟ್ಟಡದಿಂದ ಬಿದ್ದು ಬೆನ್ನು ಮತ್ತು ಕಾಲಿನ ಮೂಳೆ ಮುರಿತಕ್ಕೊಳಗಾಗಿ ಆಸ್ಪತ್ರೆಯಲ್ಲಿದ್ದು ನಡೆಯಲಾರದ ಸ್ಥಿತಿಯಲ್ಲಿರುವ ಕಾರ್ಕಳ ಕುಕ್ಕುಂದೂರು ಬಂಗ್ಲೆಗುಡ್ಡೆಯ ರಾಜೇಶ್‌ ಶೆಟ್ಟಿ (31) ತನ್ನ ಸಂಬಂಧಿಕರು, ಆಪ್ತರ ನೆರವಿನ ನಿರೀಕ್ಷೆಯಲ್ಲಿದ್ದಾರೆ.

Advertisement

ಕಾರ್ಕಳ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಅನಂತರ ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾರೆ. ಇನ್ನೂ ಮೂರು ತಿಂಗಳುಗಳ ಕಾಲ ಚಿಕಿತ್ಸೆ ಬೇಕಾಗಿದೆ. ಆದರೆ ರಾಜೇಶ್‌ ಶೆಟ್ಟಿ ಅವರಿಗೆ ಸಹಾಯಕ್ಕೆ ಯಾರೂ ಇಲ್ಲ. ನೆರವಿಗೆ ಸೇವಕರ ಅತೀ ಅಗತ್ಯವಿದೆ. ಸಂಬಂಧಿಕರನ್ನು ಪತ್ತೆ ಹಚ್ಚುವ ಪ್ರಯತ್ನ ಫ‌ಲ ನೀಡಿಲ್ಲ. ಸಂಬಂಧಿಕರು, ಆಪ್ತರು ತುರ್ತಾಗಿ ಜಿಲ್ಲಾಸ್ಪತ್ರೆಯ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿಸಬೇಕು ಎಂದು ಆಸ್ಪತ್ರೆಗೆ ದಾಖಲಿಸಿ ಗಾಯಾಳುವಿಗೆ ನೆರವಾಗುತ್ತಿರುವ ಸಮಾಜಸೇವಕ ಅಂಬಲಪಾಡಿ ವಿಶು ಶೆಟ್ಟಿ ಮನವಿ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next