Advertisement
ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಆಗಸ್ಟ್ನಲ್ಲಿ ಜಿಲ್ಲೆಗೆ ಆಗಮಿಸಿ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕು ಸ್ಥಾಪನೆ ನೆರವೇರಿಸುವ ಪ್ರಯುಕ್ತ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪೂರ್ವಭಾವಿ ಸಭೆಯಲ್ಲಿ ತೆಗೆದುಕೊಂಡ ತೀರ್ಮಾನದಂತೆಯೆ ಎಲ್ಲ ಕಾರ್ಯಕ್ರಮಗಳು ಅಂದಿನದಿನವೇ ಅಚ್ಚುಕಟ್ಟಾಗಿ ನಡೆಯಬೇಕು. ಯಾವುದೇ ರೀತಿಯ ಕಿರಿಕಿರಿಗಳು ಆಗದಂತೆ ನೋಡಿಕೊಳ್ಳಬೇಕು. ಕಾರ್ಯಕ್ರಮದ ಮುಖ್ಯ ವೇದಿಕೆ ಸಕಲ ಸೌಕರ್ಯದೊಂದಿಗೆ ಸಜ್ಜಾಗುವಂತೆ ವ್ಯವಸ್ಥೆ ಮಾಡಬೇಕು. ನಗರದ ಎಲ್ಲಾ ರಸ್ತೆಗಳನ್ನು ಸರಿಪಡಿಸಬೇಕು ಎಂದು ಅವರು ಕೆಲವು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದ ಜಿಲ್ಲಾಧಿಕಾರಿಗಳು, ಸಂಬಂಧಿಸಿದ ಅಧಿಕಾರಿಗಳು ನಿರಂತರ ಸಂಪರ್ಕದಲ್ಲಿದ್ದು ಕಾರ್ಯಕ್ರಮದ ತಯಾರಿ ನಡೆಸಬೇಕು ಎಂದು ಸೂಚಿಸಿದರು.
Related Articles
Advertisement
ಕಾಮಗಾರಿಗೆ ಶಂಕುಸ್ಥಾಪನೆಜಿಲ್ಲಾ ಕಚೇರಿಗಳ ಸಂಕೀರ್ಣ, ಅಮೃತ ಯೋಜನೆ, ಇಂಜಿನಿಯರಿಂಗ್ ಕಾಲೇಜು, 100 ಹಾಸಿಗೆಯ ಆಸ್ಪತ್ರೆ, ಜಿಲ್ಲಾ ಕ್ರೀಡಾಂಗಣ, ಗಾಂಧಿ ಭವನ, ಉದ್ಯಾನ ವನಗಳು, ಬಿದ್ರಿ ಕಲಾ ಗ್ಯಾಲರಿ, ಅಲೆಮಾರಿ ಸಮುದಾಯದ ಮನೆಗಳ ನಿರ್ಮಾಣ, ಬಸ್ ಸೆಲ್ಟರ್,
ಅಲ್ಪಸಂಖ್ಯಾತರ ಪಿಯು ಕಾಲೇಜು, ಮೌಲಾನ ಅಜಾದ್ ಭವನ, ಎಸ್ಸಿಪಿ ಹಾಗೂ ಟಿಎಸ್ಪಿ ಯೋಜನೆಯ ರಸ್ತೆಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ನಿಲಯ, ಕುಡಿವ ನೀರಿನ ಟ್ಯಾಂಕ್ಗಳು ಸೇರಿದಂತೆ ಇನ್ನಿತರ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಬೇಕಿದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.