Advertisement

ಡಿಕೆಶಿ ಭೇಟಿ ಮಾಡಿ ಧೈರ್ಯ ತುಂಬಿದ ಕುಮಾರಸ್ವಾಮಿ

11:15 PM Oct 21, 2019 | Team Udayavani |

ಬೆಂಗಳೂರು: ತಿಹಾರ್‌ ಜೈಲಿನಲ್ಲಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ಅವರನ್ನು ಸೋಮವಾರ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಭೇಟಿ ಮಾಡಿದರು. ಸಂಸದ ಡಿ.ಕೆ.ಸುರೇಶ್‌, ಮಾಜಿ ಸಚಿವರಾದ ಸಿ.ಎಸ್‌.ಪುಟ್ಟರಾಜು, ಸಾ.ರಾ.ಮಹೇಶ್‌ ಅವರೊಂದಿಗೆ ಡಿ.ಕೆ.ಶಿವಕುಮಾರ್‌ ಅವರನ್ನು ಭೇಟಿ ಮಾಡಿದ ಕುಮಾರಸ್ವಾಮಿ ಅವರಿಗೆ ಧೈರ್ಯ ತುಂಬಿದರು.

Advertisement

ನಂತರ ಸುದ್ದಿಗಾರರ ಜತೆ ಮಾತನಾಡಿ, ಶಿವಕುಮಾರ್‌ ಅವರಿಗೆ ಧೈರ್ಯ ತುಂಬಲು ಬಂದಿದ್ದೆವು. ಮುಂದಿನ ದಿನಗಳಲ್ಲಿ ಎಲ್ಲವೂ ಒಳ್ಳೆಯದಾಗಲಿದ್ದು ಈ ವಿಷಯದಲ್ಲಿ ರಾಜಕೀಯ ಮಾಡಿದ ವರಿಗೆ ಜನರು ಪಾಠ ಕಲಿಸಲಿದ್ದಾರೆ ಎಂದರು. ಕರ್ನಾಟಕದಲ್ಲಿ ಮೈತ್ರಿ ಸರ್ಕಾರ ಇದ್ದಾಗ ನಾನು ಡಿ.ಕೆ.ಶಿವಕುಮಾರ್‌ ಜತೆಯಾಗಿ ಕೆಲಸ ಮಾಡಿದ್ದೇವೆ. ಇಂದು ಕೆಟ್ಟ ಘಳಿಗೆಯಲ್ಲಿ ಶಿವಕುಮಾರ್‌ ತಿಹಾರ್‌ ಜೈಲಿನಲ್ಲಿರುವಂತಾಗಿದೆ.

ಇದು ವೈಯಕ್ತಿಕ ಭೇಟಿಯಾಗಿದ್ದು ಪಕ್ಷಕ್ಕೆ ಸಂಬಂಧಿಸಿದ್ದಲ್ಲ. ಶಿವಕುಮಾರ್‌ ಜತೆ ನಾನಿದ್ದೇನೆ ಎಂದು ತಿಳಿಸಿದರು. ಇ.ಡಿ ಅಧಿಕಾರಿಗಳು ಕೇಳಿದ ಎಲ್ಲ ದಾಖಲೆಗಳನ್ನು ಶಿವಕುಮಾರ್‌ ನೀಡಿದ್ದಾರೆಂಬ ಮಾಹಿತಿ ನನಗಿದೆ. ಶಿವಕುಮಾರ್‌ ಅವರು ವಿಚಾರಣೆಗೆ ಸಹಕರಿಸಿದರೂ ರಾಜಕೀಯ ಷಡ್ಯಂತ್ರಗಳಿಂದಾಗಿ ಜೈಲಿನಲ್ಲಿರುವಂತಾಗಿದೆ ಎಂದು ಆರೋಪಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next