Advertisement

Meet Friends: ಧಾರವಾಡದ ಹಳೆಯ ಗೆಳೆಯರ ಭೇಟಿಯಾದ ತೆಲುಗು ನಟ ಶ್ರೀಕಾಂತ್

10:22 PM Sep 15, 2024 | Team Udayavani |

ಧಾರವಾಡ: ಇಲ್ಲಿಯ ಸಿಎಸ್‌ಐ ಕಾಲೇಜಿನಲ್ಲಿ ಕಾಮರ್ಸ್ ಪದವಿ ಪಡೆದಿರುವ ತೆಲುಗು ನಟ ಶ್ರೀಕಾಂತ್‌  ರವಿವಾರ ನಗರಕ್ಕೆ ಆಗಮಿಸಿ ತಮ್ಮ ಹಳೆಯ ಗೆಳೆಯರ ಭೇಟಿಯಾಗಿ ಉಪಹಾರ ಸೇವಿಸಿ ಉಭಯ ಕುಶಲೋಪರಿ ವಿಚಾರಿಸಿ ತೆರಳಿದ್ದಾರೆ. ಮೂಲತಃ ಗಂಗಾವತಿಯವರಾದ ಶ್ರೀಕಾಂತ, ಧಾರವಾಡ ಸಿಎಸ್‌ಐ ಕಾಲೇಜಿನಲ್ಲಿ ಕಾಮರ್ಸ್ ಪದವಿ ಪಡೆದಿದ್ದಾರೆ.

Advertisement

ಬೆಂಗಳೂರಿನಿಂದ ವಿಮಾನದ ಮೂಲಕ ಹುಬ್ಬಳ್ಳಿಗೆ ಆಗಮಿಸಿದ ಅವರು, ತಮ್ಮ ಸ್ವಂತ ಊರು ಗಂಗಾವತಿಗೆ ಹೊರಟಿದ್ದರು. ಈ ವೇಳೆ ಧಾರವಾಡದ ತಮ್ಮ ಸ್ನೇಹಿತ ಉಪವನ ಹೋಟೆಲ್ ಮಾಲೀಕ ದಿನೇಶ ಶೆಟ್ಟಿಯವರ ಮನೆಗೆ ಭೇಟಿ ನೀಡಿ ಅವರ ಮನೆಯಲ್ಲೇ ಬೆಳಗಿನ ಉಪಹಾರ ಸೇವಿಸಿದ್ದಾರೆ.

ಕಾಲೇಜು ದಿನಗಳಲ್ಲಿ ಉಪವನ ಹೋಟೆಲ್‌ನಲ್ಲೇ ಶ್ರೀಕಾಂತ ಅವರು ಉಪಹಾರ ಸೇವಿಸುತ್ತಿದ್ದರು. ಹೀಗಾಗಿ ತಮ್ಮ ಗೆಳೆಯರ ಭೇಟಿಗೆ ನಟ ಶ್ರೀಕಾಂತ ಧಾರವಾಡಕ್ಕೆ ಆಗಾಗ ಭೇಟಿ ನೀಡುತ್ತಲೇ ಇರುತ್ತಾರೆ.

Advertisement

Udayavani is now on Telegram. Click here to join our channel and stay updated with the latest news.

Next