Advertisement

ಶಾ ಭೇಟಿ: ಕಾಂಗ್ರೆಸ್‌ಗೆ ಗಾಬರಿ

12:04 PM Aug 14, 2017 | Team Udayavani |

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರ ಒಂದು ಭೇಟಿಯಲ್ಲೇ ಕಾಂಗ್ರೆಸ್‌ ಅದೆಷ್ಟು ಗಾಬರಿಗೊಂಡಿದೆ ಎಂಬುದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‌ ಗುಂಡೂರಾವ್‌ ಅವರ ಹೇಳಿಕೆಯಿಂದ ಸ್ಪಷ್ಟವಾಗಿದೆ ಎಂದು ರಾಜ್ಯ ಬಿಜೆಪಿ ವಕ್ತಾರ ಹಾಗೂ ಶಾಸಕ ಎಸ್‌.ಸುರೇಶ್‌ಕುಮಾರ್‌ ವ್ಯಂಗ್ಯವಾಡಿದ್ದಾರೆ.

Advertisement

ರಾಜ್ಯದಲ್ಲಿನ ಆಡಳಿತಾರೂಢ  ಕಾಂಗ್ರೆಸ್‌ ಸರ್ಕಾರವನ್ನು ಅಸ್ಥಿರಗೊಳಿಸುವ ಸಂಚಿನೊಂದಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಕರ್ನಾಟಕಕ್ಕೆ ಭೇಟಿ ಕೊಟ್ಟಿದ್ದಾರೆ ಎಂಬ ದಿನೇಶ್‌ ಗುಂಡೂರಾವ್‌ ಹೇಳಿಕೆಗೆ ಪ್ರತಿಕ್ರಿಯಿಸಿರುವ ಅವರು, ಅಮಿತ್‌ ಶಾ ಭೇಟಿಯ ಮೊದಲ ದಿನವೇ ಕಾಂಗ್ರೆಸ್‌ನವರು ಇಷ್ಟೊಂದು ಗಲಿಬಿಲಿಗೊಳ್ಳುತ್ತಾರೆ ಎಂದು ಭಾವಿಸಿರಲಿಲ್ಲ.

ಶಾ ಅವರು ರಾಜ್ಯ ಭೇಟಿ ಮುಗಿಸಿ ವಾಪಸಾದ ನಂತರ ರಾಜಕೀಯದಲ್ಲಿ ಘಟಿಸಬಹುದಾದ ವಿದ್ಯಮಾನಗಳ ಬಗ್ಗೆ ಕಾಂಗ್ರೆಸ್‌ ಗಾಬರಿಗೊಂಡಿರುವುದು ಇದರಿಂದ ಗೊತ್ತಾಗುತ್ತಿದೆ ಎಂದಿದ್ದಾರೆ. ಬಿಜೆಪಿ ಸಂಘಟನೆ ಬಲಪಡಿಸಿ ಪಕ್ಷವನ್ನು ಮುಂದಿನ ಚುನಾವಣೆಗೆ ಸಜ್ಜುಗೊಳಿಸುವ ಉದ್ದೇಶದಿಂದ ಅಮಿತ್‌ ಶಾ ರಾಜ್ಯಕ್ಕೆ ಬಂದಿದ್ದಾರೆ ಎಂದು ಹೇಳಿದ್ದಾರೆ.

ಡಿಕೆಶಿಯನ್ನು ಮಾತ್ರವೇ ಏಕೆ ಹೆಲಿಕಾಪ್ಟರ್‌ನಲ್ಲಿ ಕರೆತಂದರು? 
ರಾಯಚೂರಿಗೆ ಬಂದಿದ್ದ ರಾಹುಲ್‌ ಗಾಂಧಿ ಅವರು ಅಲ್ಲಿಂದ ವಾಪಸಾಗುವಾಗ ಸಚಿವ ಡಿ.ಕೆ.ಶಿವಕುಮಾರ್‌ ಅವರನ್ನು ಮಾತ್ರವೇ ತಮ್ಮೊಂದಿಗೆ ಹೆಲಿಕಾಪ್ಟರ್‌ನಲ್ಲಿ ಬಳ್ಳಾರಿವರೆಗೆ ಏಕೆ ಕರೆತಂದರು ಎಂದು ಬಿಜೆಪಿ ಪ್ರಶ್ನೆ ಮಾಡಿಲ್ಲ. ಜನ ಕಾಂಗ್ರೆಸ್‌ನಿಂದ ದೂರವಾಗಿ ಬಿಜೆಪಿ ಆಯ್ಕೆಮಾಡಿಕೊಳ್ಳುತ್ತಿರುವುದನ್ನು ಸಹಿಸದೆ ವಿನಾ ಕಾರಣ ಬಿಜೆಪಿಯನ್ನು ಟೀಕಿಸುತ್ತಿದ್ದಾರೆ ಎಂದು ಸುರೇಶ್‌ಕುಮಾರ್‌ ವ್ಯಂಗ್ಯವಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next