Advertisement

ಗ್ರಾಪಂ ನೌಕರರ ಬೇಡಿಕೆ ಈಡೇರಿಸಿ

05:25 AM Jun 03, 2020 | Lakshmi GovindaRaj |

ಮೈಸೂರು: ಗ್ರಾಮ ಪಂಚಾಯಿತಿ ನೌಕರರ ಬೇಡಿಕೆ ಈಡೇರಿಸಲು ಒತ್ತಾಯಿಸಿ ರಾಜ್ಯ ಗ್ರಾಮ ಪಂಚಾಯತ್‌ ನೌಕರರ ಸಂಘ (ಸಿಐಟಿಯುಸಿ)ದಿಂದ ಜಿಲ್ಲಾ ಪಂಚಾಯಿತಿ ಮುಂದೆ ಪ್ರತಿಭಟನೆ ನಡೆಸಿದರು. ಈ ವೇಳೆ ಮಾತನಾಡಿದ  ಸಂಘಟನೆ ಅಧ್ಯಕ್ಷ ಬಸವರಾಜು, ರಾಜ್ಯದ 6025 ಗ್ರಾಪಂಗಳಲ್ಲಿ ಕೆಲಸ ನಿರ್ವಹಿಸುತ್ತಿರುವ 6,500 ಸಿಬ್ಬಂದಿಗೆ 900 ಕೋಟಿ ರೂ.ಹಣ ಬೇಕಾಗಿದೆ ಎಂದು ಅಂದಾಜಿಸಲಾಗಿದೆ.

Advertisement

900 ಕೋಟಿ ರೂ. ಹಣದಲ್ಲಿ 518 ಕೋಟಿ ಮಾತ್ರ ಹಣಕಾಸು  ಇಲಾಖೆ  ಮಂಜೂರು ಮಾಡಿದೆ. ಕಳೆದ 2 ವರ್ಷಗಳಿಂದ ಸಿಬ್ಬಂದಿ ವೇತನ ಬಾಕಿ ಉಳಿದಿದ್ದು, 3 ತಿಂಗಳಿಗೊಮ್ಮೆ ಬಿಡುಗಡೆಯಾದ ಕಂತಿನ ಹಣದಲ್ಲಿ 2 ತಿಂಗಳು ವೇತನಕ್ಕಾಗಿ ಮಾತ್ರ ಹಣ ಸಾಕಾಗುತ್ತದೆ. 2 ವರ್ಷಗಳಿಂದ 8 ತಿಂಗಳು ಹಣ ಬಾಕಿಯಿದೆ.  ವೇತನಕ್ಕಾಗಿ 2020-21ನೇ ಸಾಲಿನ ಹಣ ಮಂಜೂರು ಮಾಡಿಸಬೇಕು ಎಂದು ಆಗ್ರಹಿಸಿದರು.

ಎಲ್ಲಾ ಸಿಬ್ಬಂದಿಗೆ ಪಿಂಚಣಿ, ವೈದ್ಯಕೀಯ ವೆಚ್ಚ ಸಿಗುವಂತಾಗಬೇಕು. ಕನಿಷ್ಠ ವೇತನ ಪಡೆಯುವ ಎಲ್ಲರಿಗೂ ಬಿಪಿಎಲ್‌ ಕಾರ್ಡ್‌  ಉಳಿಸಿಕೊಳ್ಳಲು ಮಂಜೂರಾತಿ ಮಿತಿ 1.20 ಲಕ್ಷದಿಂದ 2 ಲಕ್ಷಕ್ಕೆ ಹೆಚ್ಚಿಸಬೇಕು. ಅದಕ್ಕಾಗಿ ಆಹಾರ ಇಲಾಖೆಗೆ ಪತ್ರ ಬರೆಯಬೇಕು. ಈಗ ಸದ್ಯಕ್ಕೆ ಸೇವಾ ನಿಯಮಾವಳಿ ಗೆಜೆಟ್‌ ಪ್ರಕಟಣೆಯಾಗಿದ್ದು ತಿದ್ದುಪಡಿ ಪರಿಶೀಲಿಸಿ ಆದೇಶ  ಹೊರಡಿಸಬೇಕು ಎಂದು ಒತ್ತಾಯಿಸಿದರು.

ಈ ವೇಳೆ ಸಂಘಟನೆಯ ಪ್ರಧಾನ ಕಾರ್ಯದರ್ಶಿ ದಿನೇಶ್‌, ಖಜಾಂಚಿ ಲೋಕೇಶ್‌ ಕಿರಿಜಾಜಿ ಇತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next