Advertisement

ಖಾಸಗಿ ಶಾಲಾಡಳಿತ ಮಂಡಳಿ ಪದಾಧಿಕಾರಿಗಳಿಂದ ಸಿಎಂ ಭೇಟಿ

11:03 PM Jun 07, 2019 | Team Udayavani |

ಬೆಂಗಳೂರು: ರಾಜ್ಯದ ಸಿಬಿಎಸ್‌ಇ, ಐಸಿಎಸ್‌ಇ ಹಾಗೂ ರಾಜ್ಯ ಪಠ್ಯಕ್ರಮದ ಖಾಸಗಿ ಶಾಲಾಡಳಿತ ಮಂಡಳಿ ಪದಾಧಿಕಾರಿಗಳು ಶುಕ್ರವಾರ ಸಿಎಂ ಕುಮಾರಸ್ವಾಮಿಯವರನ್ನು ಭೇಟಿ ಮಾಡಿ, ಶಿಕ್ಷಣ ಹಕ್ಕು ಕಾಯ್ದೆಯಡಿ ದಾಖಲಾಗಿರುವ ವಿದ್ಯಾರ್ಥಿಗಳ ಹಿಂದಿನ ಸಾಲಿನ ಶುಲ್ಕ ಮರುಪಾವತಿ, ಬ್ಯಾಗ್‌ ಭಾರ ಇಳಿಸಿರುವ ಅವೈಜ್ಞಾನಿಕ ಕ್ರಮ, ಕನ್ನಡ ಕಡ್ಡಾಯ ಇತ್ಯಾದಿ ವಿಷಯಗಳ ಕುರಿತು ಚರ್ಚೆ ನಡೆಸಿದರು.

Advertisement

ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಖಾಸಗಿ ಶಾಲಾಮಂಡಳಿಯ ಪದಾಧಿಕಾರಿಗಳು, ಖಾಸಗಿ ಶಾಲೆಗಳು ಎದುರಿಸುತ್ತಿರುವ ಸಮಸ್ಯೆಯನ್ನು ಸರ್ಕಾರದ ಗಮನಕ್ಕೆ ತಂದರು. ಆರ್‌ಟಿಇ ಶುಲ್ಕ ಮರುಪಾವತಿಯಾಗಿಲ್ಲ. ಸರ್ಕಾರ ಅನುದಾನ ಬಿಡುಗಡೆ ಮಾಡಿದರೂ ಅಧಿಕಾರಿಗಳು ಶಾಲೆಗಳಿಗೆ ನೀಡುತ್ತಿಲ್ಲ. ಶಾಲಾ ಮಕ್ಕಳ ಬ್ಯಾಗ್‌ ಭಾರ ಕಡಿಮೆ ಮಾಡಿರುವುದು ಅವೈಜ್ಞಾನಿಕ ಹಾಗೂ ಅದರ ಅನುಷ್ಠಾನ ಸಾಧ್ಯವಿಲ್ಲ. ಪಠ್ಯಪುಸ್ತಕಗಳು ಇನ್ನೂ ಶಾಲೆಗೆ ಬಂದಿಲ್ಲ ಎಂದು ತಿಳಿಸಿದರು.

ಅಲ್ಲದೆ, ಸಿಬಿಎಸ್‌ಇ ಹಾಗೂ ಐಸಿಎಸ್‌ಇ ಶಾಲೆಗಳಲ್ಲಿ ಕನ್ನಡವನ್ನು ಮೂರನೇ ಭಾಷೆಯಾಗಿ ಕಲಿಸಲು ಅವಕಾಶ ನೀಡಬೇಕು ಎಂಬುದು ಸೇರಿದಂತೆ ಹಲವು ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟರು. ಕರ್ನಾಟಕ ಖಾಸಗಿ ಶಾಲಾಡಳಿತ ಮಂಡಳಿಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಡಿ.ಶಶಿಕುಮಾರ್‌ ಸೇರಿ ಹಲವರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next