Advertisement

ಜಿಲ್ಲೆಯ ಪ್ರಮುಖ ಬೆಳೆ-ಉತ್ಪನ್ನ ಆಯ್ಕೆಗೆ ಸಭೆ

01:52 PM Aug 09, 2020 | Suhan S |

ಬೆಳಗಾವಿ: ಜಿಲ್ಲೆಯ ಸಾವಯವ ಬೆಲ್ಲ ಉತ್ಪಾದನಾ ಘಟಕಗಳಿಗೆ ಅತ್ಯುತ್ತಮ ಬ್ರ್ಯಾಂಡ್‌ ಸೃಷ್ಟಿಸಬಹುದಲ್ಲದೆ ಅಂತಾರಾಷ್ಟ್ರೀಯ ಮಾರುಕಟ್ಟೆ ಕೂಡ ಸೃಷ್ಟಿಸಲು ವಿಪುಲ ಅವಕಾಶಗಳಿವೆ. ಈ ಹಿನ್ನೆಲೆಯಲ್ಲಿ ಆತ್ಮ ನಿರ್ಭರ ಭಾರತ ಅಭಿಯಾನದಡಿ ಒಂದು ಜಿಲ್ಲೆ; ಒಂದು ಉತ್ಪನ್ನವಾಗಿ ಬೆಲ್ಲವನ್ನು ಆಯ್ಕೆ ಮಾಡುವ ಬಗ್ಗೆ ಪರಿಶೀಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಹೇಳಿದರು.

Advertisement

ಆತ್ಮ ನಿರ್ಭರ ಭಾರತ ಅಭಿಯಾನದ ಭಾಗವಾಗಿ ಒಂದು ಜಿಲ್ಲೆ; ಒಂದು ಉತ್ಪನ್ನ-ಬೆಳೆ ಕುರಿತು ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ಜಿಲ್ಲಾ ಮಟ್ಟದ ಕೃಷಿ, ವಾಣಿಜ್ಯ,ಆಹಾರ ಸಂಸ್ಕರಣೆ ಮತ್ತು ಕೃಷಿ ರಫ್ತು ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಈ ಅಭಿಯಾನದಡಿ ಜಿಲ್ಲೆಯ ಪ್ರಮುಖ ಬೆಳೆ ಹಾಗೂ ಉತ್ಪನ್ನವನ್ನು ಗುರುತಿಸಿ ಈ ಬೆಳೆಯ ಮೌಲ್ಯವರ್ಧನೆ, ಸಂಸ್ಕರಣೆ, ಪ್ಯಾಕಿಂಗ್‌, ಬ್ರ್ಯಾಂಡ್‌ ಅಭಿವೃದ್ಧಿ, ಮಾರುಕಟ್ಟೆಗೆ ಪ್ರೋತ್ಸಾಹಿಸಲಾಗುತ್ತದೆ ಎಂದರು.

ಬೆಲ್ಲ ತಯಾರಿಕಾ ಘಟಕಗಳನ್ನು ಮೊದಲು ಗುರುತಿಸಿ ಎಲ್ಲ ಆಯಾಮಗಳಲ್ಲಿ ಪರಿಶೀಲಿಸಿದ ಬಳಿಕ ಆತ್ಮನಿರ್ಭರ್‌ ಅಭಿಯಾನದ ಭಾಗವಾಗಿ ಒಂದು ಉತ್ಪನ್ನ ವಾಗಿ ಆಯ್ಕೆ ಮಾಡಲಾಗುವುದು ಎಂದರು. ಜಿಲ್ಲೆಯಲ್ಲಿ ಹಾಲು, ಅರಿಷಿಣ, ಮಾವು ಇತ್ಯಾದಿ ಸಂಸ್ಕರಣೆ ಘಟಕಗಳ ಸ್ಥಾಪನೆಗೂ ಉತ್ತಮ ಅವಕಾಶಗಳಿವೆ. ಇವುಗಳಲ್ಲಿ ಮಾವು ಸಂಸ್ಕರಣೆ ಘಟಕಗಳ ಮೂಲಕ ವಿವಿಧ ಉಪ ಉತ್ಪನ್ನಗಳ ತಯಾರಿಕೆಗೂ ಸಾಕಷ್ಟು ಅವಕಾಶಗಳಿವೆ. ಕೃಷಿಯೇತರ ಜಮೀನಿನಲ್ಲಿ ಸ್ಥಾಪಿತ ಘಟಕಗಳಿಗೆ ಮಾತ್ರ ಸಾಲಸೌಲಭ್ಯ ದೊರಕುವುದರಿಂದ ಬೆಲ್ಲ ಅಥವಾ ಎರಡನೇ ಆಯ್ಕೆಯಾಗಿ ಅರಿಷಿಣ ಸಂಸ್ಕರಣಾ ಘಟಕವನ್ನು ಆಯ್ಕೆ ಮಾಡುವಾಗ ನಬಾರ್ಡ್‌ ಮತ್ತು ಬೇರೆ ಬೇರೆ ಹಣಕಾಸು ಸಂಸ್ಥೆಗಳ ಜೊತೆ ಚರ್ಚಿಸಿದ ಬಳಿಕ ಮತ್ತೂಂದು ಸುತ್ತಿನ ಚರ್ಚೆ ನಡೆಸಿ ಅಂತಿಮ ತೀರ್ಮಾನ ಮಾಡಲಾಗುವುದು ಎಂದು ಹೇಳಿದರು. ಆತ್ಮ ನಿರ್ಭರ ಭಾರತ ಅಭಿಯಾನ- ಒಂದು ಜಿಲ್ಲೆ; ಒಂದು ಉತ್ಪನ್ನದ ಉತ್ತೇಜನಕ್ಕೆ ಮೊದಲ ವರ್ಷ ಶೇ.100 ರಷ್ಟು ನೆರವನ್ನು ಕೇಂದ್ರ ಸರ್ಕಾರವೇ ಭರಿಸಲಿರುವುದರಿಂದ ಸಂಬಂಧಿಸಿದ ಎಲ್ಲ ಇಲಾಖೆಯ ಅಧಿಕಾರಿಗಳು ಆದಷ್ಟು ಬೇಗನೆ ವಿಸ್ತೃತ ಯೋಜನೆ ರೂಪಿಸಿ ಕೇಂದ್ರ ಸರ್ಕಾರಕ್ಕೆ ಕಳುಹಿಸಬೇಕು ಎಂದು ನಿರ್ದೇಶನ ನೀಡಿದರು.

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ್‌ ಎಚ್‌.ವಿ. ಮಾತನಾಡಿ, ಮುಂಬರುವ ದಿನಗಳಲ್ಲಿ ಬ್ಯಾಂಕುಗಳಿಂದ ಸರಳವಾಗಿ ಸಾಲಸೌಲಭ್ಯ ಒದಗಿಸಲು ಸಾಧ್ಯವಾಗುವಂತಹ ಆಹಾರ ಸಂಸ್ಕರಣೆ ಘಟಕಗಳನ್ನು ಆಯ್ಕೆ ಮಾಡುವುದರಿಂದ ಅಭಿವೃದ್ಧಿ ಸುಲಭವಾಗುತ್ತದೆ ಎಂದು ಹೇಳಿದರು.

ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ ಮಾತನಾಇ ಯೋಜನೆಮಾಹಿತಿ ನೀಡಿದರು. ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ದೊಡ್ಡಬಸವರಾಜ್‌, ಕೃಷಿ ಇಲಾಖೆಯ ಉಪ ನಿರ್ದೇಶಕ ಡಾ.ಎಚ್‌.ಡಿ.ಕೋಳೇಕರ್‌, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ರವೀಂದ್ರ ಹಕಾಟಿ, ಲೀಡ್‌ ಬ್ಯಾಂಕ್‌ ವ್ಯವಸ್ಥಾಪಕ ರಾಹುಲ್‌ ಸಭೆಯಲ್ಲಿ ಭಾಗವಹಿಸಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next