Advertisement

Forest Act ತಿದ್ದುಪಡಿ ಸೇರಿ ಬೇಡಿಕೆ ಈಡೇರಿಕೆಗೆ ಇಂದು ಸಭೆ

01:29 AM Oct 05, 2024 | Team Udayavani |

ಬೆಂಗಳೂರು: ಮಲೆನಾಡಿನ ಜನ ಸಾಗುವಳಿ ಮಾಡಿಕೊಂಡು ಬರುತ್ತಿರುವ ಜಮೀನುಗಳನ್ನು ಒತ್ತುವರಿಯ ಹೆಸರಿನಲ್ಲಿ ತೆರವುಗೊಳಿಸ ಬಾರದು. ವೈಜ್ಞಾನಿಕ ಮಾನದಂಡವನ್ನು ಅನುಸರಿಸಿ ಮಿತಿಗೆ ಒಳಪಟ್ಟು ಪಟ್ಟ ಹಕ್ಕುಪತ್ರ ವಿತರಿಸಬೇಕು. ಹಕ್ಕುಪತ್ರ ವಿತರಣೆಗೆ ತಡೆಯಾಗಿರುವ ಅರಣ್ಯ ಕಾಯ್ದೆಗಳಿಗೆ ತಿದ್ದುಪಡಿ ತರಬೇಕು ಎಂಬ ವಿವಿಧ ಬೇಡಿಕೆಗಳನ್ನು ಒತ್ತಾಯಿಸಿ ಅ. 5ರಂದು ದುಂಡು ಮೇಜಿನ ಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ಅಧ್ಯಕ್ಷ  ಸುಂದರೇಶ್‌ ಅತ್ತಿಕುಳಿ ತಿಳಿಸಿದ್ದಾರೆ.

Advertisement

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, 2011ರಿಂದ ಈಚೆಗೆ ಇಲ್ಲಿ ಬದುಕುತ್ತಿರುವ ಬಡ ಕುಟುಂಬಗಳಿಗೆ ಒಂದು ಹಕ್ಕುಪತ್ರ ನೀಡಲು ಸಾಧ್ಯವಾಗದ ಕಾರಣ ಅದೆಷ್ಟೋ ಬಡ ಕುಟುಂಬಗಳಿಗೆ ಇವತ್ತಿನವರೆಗೂ ಒಂದು ಮನೆ ಕೊಡಲು ಸಾಧ್ಯವಾಗಿಲ್ಲ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next