Advertisement

20ರಂದು ದೆಹಲಿಯಲ್ಲಿ ಸಭೆ: ಡಿ.ಕೆ.ಶಿವಕುಮಾರ್‌

06:55 AM Aug 13, 2018 | Team Udayavani |

ಹುಬ್ಬಳ್ಳಿ: ಆ.20ರಂದು ಕೇಂದ್ರ ನೀರಾವರಿ ಸಚಿವ ನಿತಿನ್‌ ಗಡ್ಕರಿ ದೆಹಲಿಯಲ್ಲಿ ಸಭೆ ಕರೆದಿದ್ದು, ರಾಜ್ಯದ ನಿರಾವರಿ ಯೋಜನೆಗಳ ಕುರಿತು ಚರ್ಚೆ ನಡೆಸಲಾಗುವುದು ಎಂದು ನೀರಾವರಿ ಸಚಿವ ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ.

Advertisement

ಸುದ್ದಿಗಾರರ ಜತೆ ಮಾತನಾಡಿ, ಪಶ್ಚಿಮಘಟ್ಟ ಪ್ರದೇಶದ ನದಿಗಳ ತಿರುವು ಯೋಜನೆಗಳಿಗೆ ನಮ್ಮ ಸಹಮತವಿದೆ. ನೀರಾವರಿ ಯೋಜನೆಗಳ ಕುರಿತು ಚರ್ಚಿಸಲು ಆ.20ರಂದು ಕೇಂದ್ರ ನೀರಾವರಿ ಸಚಿವ ನಿತಿನ್‌ ಗಡ್ಕರಿ ದೆಹಲಿಯಲ್ಲಿ ಸಭೆ ಕರೆದಿದ್ದಾರೆ. ಅಲ್ಲಿ ಪಶ್ಚಿಮಘಟ್ಟ, ಗೋದಾವರಿ ಸೇರಿ ಇನ್ನಿತರ ವಿಷಯಗಳ ಕುರಿತು ಚರ್ಚಿಸಲಾಗುವುದು. ಸಮುದ್ರಕ್ಕೆ ವ್ಯರ್ಥವಾಗಿ ಹರಿಯುವ ನೀರನ್ನು ಉಳಿಸಿಕೊಳ್ಳಬೇಕು. ಆ ನಿಟ್ಟಿನಲ್ಲಿ 300ಕ್ಕೂ ಅಧಿಕ ಸಲಹೆಗಳು ಬಂದಿವೆ. ಮಹದಾಯಿ ನದಿ ನೀರು ಹಂಚಿಕೆ ವಿವಾದ ನ್ಯಾಯಾಧಿಕರಣದಲ್ಲಿದ್ದು, ಅದರ ತೀರ್ಪು ನಮ್ಮ ಪರವಾಗಿ ಬರಲಿದೆ ಎಂಬ ಆಶಾಭಾವವಿದೆ ಎಂದರು.

ಆಲಮಟ್ಟಿ ಅಣೆಕಟ್ಟು ಎತ್ತರಿಸುವ ವಿಚಾರದಲ್ಲಿ ಭೂಸ್ವಾಧೀನ ಪ್ರಕ್ರಿಯೆ ಸಮಸ್ಯೆ ಉಂಟಾಗಿದೆ. ಈ ಬಗ್ಗೆ ಸಾರ್ವಜನಿಕರು, ರೈತರ ಅಭಿಪ್ರಾಯ ಪಡೆಯಲು ಚರ್ಚೆಗೆ ಅವಕಾಶ ನೀಡಲಾಗಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next