Advertisement

ಅಧಿಕಾರದ ಏಕೈಕ ಉದ್ದೇಶದಿಂದ ಕಾಂಗ್ರೆಸ್‌ ಮಿತ್ರರ ಸಭೆ: ರವಿಕುಮಾರ್‌

10:39 PM Jul 16, 2023 | Team Udayavani |

ಬೆಂಗಳೂರು: ವಿಪಕ್ಷಗಳು ತಮ್ಮ ತತ್ವ ಸಿದ್ಧಾಂತ ಗಳಿಗೆ ತಿಲಾಂಜಲಿ ಇಟ್ಟು ಅಧಿಕಾರಕ್ಕೆ ಬರಬೇಕೆಂಬ ಏಕೈಕ ಉದ್ದೇಶದೊಂದಿಗೆ ಮೈತ್ರಿ ಮಾಡಿಕೊಂಡಿವೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್‌. ರವಿಕುಮಾರ್‌ ಟೀಕಿಸಿದ್ದಾರೆ.

Advertisement

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನರೇಂದ್ರ ಮೋದಿ ಅವರು 2047ರ ವೇಳೆಗೆ ಪ್ರಪಂಚದಲ್ಲಿ ಭಾರತವನ್ನು ನಂ.1 ರಾಷ್ಟ್ರವಾಗಿ ಮಾಡುವ ದೂರದೃಷ್ಟಿ ಇಟ್ಟುಕೊಂಡಿದ್ದಾರೆ.

ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಭಾರತವನ್ನು ಪರಿವರ್ತಿಸುವ ಒಂದೇ ಕನಸು ಮೋದಿ ಅವರದು. ಪಾರ್ಟಿ ಬೆಳೆಸುವುದು, ಮತಬ್ಯಾಂಕ್‌ ದೃಢೀಕರಣದ ಉದ್ದೇಶ ಅವರದಲ್ಲ. ಅಂಥ ದುರುದ್ದೇಶದ ಚಿಂತನೆ ವಿಪಕ್ಷಗಳದ್ದು. ಸರಕಾರ ಹಣವನ್ನು ಕಾಂಗ್ರೆಸ್‌ ಪಂಚ ಗ್ಯಾರಂಟಿ ಯೋಜನೆಗಳಿಗೆ ಉಪಯೋಗಿಸುತ್ತಿರುವುದು ಜನರಿಗೆ ಅರ್ಥವಾಗಿದೆ. ಸಂಸತ್‌ ಚುನಾವಣೆಯಲ್ಲಿ ಜನರು ಕಾಂಗ್ರೆಸ್‌ಗೆ ಪಾಠ ಕಲಿಸುವುದು ನಿಶ್ಚಿತ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next