Advertisement

ಜಮ್ಮು-ಕಾಶ್ಮೀರ ಕುತೂಹಲಕ್ಕೆ ಇಂದು ತೆರೆ

12:53 AM Jun 24, 2021 | Team Udayavani |

ಹೊಸದಿಲ್ಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ಮತ್ತೆ ರಾಜ್ಯ ಸ್ಥಾನಮಾನವೋ ಅಥವಾ ವಿಧಾನಸಭೆ ಚುನಾವಣೆ ನಡೆಸುವ ಸಲುವಾಗಿ ಕ್ಷೇತ್ರ ಪುನರ್ವಿಂಗಡಣೆ ಕುರಿತಂತೆ ಚರ್ಚೆಯೋ…!

Advertisement

ಗುರುವಾರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಜಮ್ಮು ಮತ್ತು ಕಾಶ್ಮೀರದ 14 ರಾಜಕೀಯ ಪಕ್ಷಗಳ ನಾಯಕರ ಸಭೆ ನಡೆಯಲಿದ್ದು, ಅದರಲ್ಲಿ ಈ ಕುತೂಹಲಕ್ಕೆ ತೆರೆ ಬೀಳಲಿದೆ.

ಗುಪRರ್‌ನಿಂದ ಫಾರೂಕ್‌ ಅಬ್ದುಲ್ಲಾ, ಮೆಹಬೂಬಾ ಮುಫ್ತಿ ಸೇರಿದಂತೆ ಮೂವರು, ಬಿಜೆಪಿ, ಕಾಂಗ್ರೆಸ್‌ ಹಾಗೂ ಇತರ ಪ್ರಾದೇಶಿಕ ಪಕ್ಷಗಳ ನಾಯಕರು ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಈ ನಡುವೆ ಜಮ್ಮು ಮತ್ತು ಕಾಶ್ಮೀರದಲ್ಲಿ 48 ಗಂಟೆಗಳ ಬಿಗಿ ಬಂದೋಬಸ್ತ್ ಜಾರಿಗೊಳಿಸಲಾಗಿದೆ. ಅಲ್ಲದೇ ಶುಕ್ರವಾರದ ವರೆಗೆ ಇಂಟರ್ನೆಟ್‌ ಸೌಲಭ್ಯಕ್ಕೆ  ಕತ್ತರಿ ಹಾಕುವ ಸಾಧ್ಯತೆ ಇದೆ.

ಸಭೆಯ ಅಜೆಂಡಾ ಏನು? :

ಕೇಂದ್ರ ಸರಕಾರ ಇದುವರೆಗೆ ಸಭೆಯ ಅಜೆಂಡಾ ಏನು ಎಂಬ ಬಗ್ಗೆ ತುಟಿ ಬಿಚ್ಚಿಲ್ಲ. ಆದರೂ ಆಂಗ್ಲ ಮಾಧ್ಯಮಗಳಲ್ಲಿನ ವರದಿ ಪ್ರಕಾರ, ಈ ಸಭೆ ಕರೆದಿರುವುದು ಕ್ಷೇತ್ರ ಮರುವಿಂಗಡಣೆ ಬಗ್ಗೆ ಚರ್ಚಿಸುವ ಸಲುವಾಗಿ. ಇನ್ನೂ ಕೆಲವು ಮಾಧ್ಯಮಗಳು, ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ ನೀಡುವ ಸಲುವಾಗಿ ಈ ಸಭೆ ಕರೆಯಲಾಗಿದೆ ಎಂದು ಹೇಳಿವೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next