Advertisement

ಶಿವಮೊಗ್ಗ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾರ್ಯಗಳ ಸಭೆ

03:36 PM Sep 16, 2019 | Sriram |

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಗ್ರಾಮೀಣಾಭಿವೃದ್ಧಿ ಸಚಿವರಾದ ಈಶ್ವರಪ್ಪ ಹಾಗೂ ಶಿವಮೊಗ್ಗ ಕ್ಷೇತ್ರದ ಸಂಸದ ರಾಘವೇಂದ್ರ ನೇತೃತ್ವದಲ್ಲಿ ಶಿವಮೊಗ್ಗ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾರ್ಯಗಳ ಬಗ್ಗೆ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಸೋಮವಾರ ಸಭೆ ನಡೆಯಿತು.

Advertisement

ಸಭೆಯಲ್ಲಿ ಪ್ರಸ್ತಾಪವಾಗಿರುವ ಪ್ರಮುಖ ಅಂಶಗಳು
– ಶಿವಮೊಗ್ಗ ಜಿಲ್ಲೆಯ ಮಲೆನಾಡು ಭಾಗದಲ್ಲಿ ಮೊಬೈಲ್ ನೆಟ್ ವರ್ಕ್ ಸಮಸ್ಯೆ ಹೆಚ್ಚಾಗಿ ಕಾಣಿಸುತ್ತಿದ್ದು ಖಾಸಗಿ ಕಂಪನಿಗಳ ಜೊತೆಗೂಡಿ ಹೆಚ್ಚಿನ‌ ಟವರ್ ಗಳನ್ನು‌ ಮಲೆನಾಡು ಭಾಗದಲ್ಲಿನ ನಿರ್ಮಾಣ‌ ಮಾಡಬೇಕು.
– ಮಲೆನಾಡು ಭಾಗದಲ್ಲಿ ಹೆಚ್ಚಿನ ಭಾಗದಲ್ಲಿ ಬಿಎಸ್ ಎನ್ ಎಲ್ ಇದ್ದು ಖಾಸಗಿ ಕಂಪನಿಗಳು‌ ಜೊತೆಗೂಡಬೇಕು ಇದರಿಂದ ಬೆಂಗಳೂರಿನಿಂದ ರಜೆ ಸಂದರ್ಭದಲ್ಲಿ ಬರುವ ಯುವಕರಿಗೆ ಸಹಾಯವಾಗಲಿದೆ.
-ಈ ಸಂದರ್ಭದಲ್ಲಿ ಹಾಜರಿದ್ದ ಖಾಸಗಿ ಟೆಲಿಕಾಮ್ ಕಂಪನಿಗಳಿಗೆ ಮಲೆನಾಡು ಭಾಗದಲ್ಲಿ ಯಾವುದೇ ರೀತಿಯಲ್ಲಿ ನೆಟ್‌ವರ್ಕ್ ಸಮಸ್ಯೆ ತಲೆದೂರುದಂತೆ ಟವರ್ ಗಳನ್ನು ಅಳವಡಿಸಬೇಕು ಹಾಗು ಇದಕ್ಕೆ ಬೇಕಾದ ನೆರವನ್ನು ನೀಡಲು ಸಿದ್ದ ಅಂತ ಕಂಪನಿಗಳಿಗೆ ಭರವಸೆ ನೀಡಲಾಯಿತು.
– ತುಮಕೂರು -ಶಿವಮೊಗ್ಗ ಹೈವೇ ಯೋಜನೆಗೆ ತೊಡಕಾಗಿರೋ ತುಮಕೂರು ಪಟ್ಟಣದ ಭೂ ಸ್ವಾದೀನ ಪ್ರಕ್ರಿಯೆಗೆ ಇದ್ದ ಸಮಸ್ಯೆಗಳನ್ನು ಬಗೆಹರಿಸಲಾಯಿತು .
-ಹೈವೆ ಯಲ್ಲಿ ಹಾದು ಹೋಗುವ ಜಾಗದಲ್ಲಿರೋ ಕರೆಗಳನ್ನು ಹೂಳೆತ್ತಿ ಅದರ ಮಣ್ಣನ್ನು ರಸ್ತೆ ನಿರ್ಮಾಣ ಕ್ಕೆ ಬಳಸಿಕೊಳ್ಳಲು ತೀರ್ಮಾನ ಮಾಡಲಾಯಿತು.
-ಹೈವೇ ‌ನಿರ್ಮಾಣ ಕಾಮಗಾರಿಗಳುನ್ನು‌ ತ್ವರಿತವಾಗಿ‌ ಮುಗಿಸಲು ಹೆಚ್ಚಿನ‌ ಅಧಿಕಾರಿಗಳನ್ನು‌‌‌ ನೇಮಕಾತಿ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.
-ಇನ್ನು ಸಿಗಂಧೂರು ಸೇತುವೆ ನಿರ್ಮಣ ಒಟ್ಟು ಉದ್ದ 2.4 ಕಿಲೋಮೀಟರ್ ಇದ್ದು ಈ ಸೇತುವೆಯನ್ನು ಪ್ರವಾಸಿ ತಾಣಕ್ಕೆ ಅನುಕೂಲವಾಗುವಂತೆ ನಿರ್ಮಾಣ ಮಾಡಲು ಸೂಚನೆ‌ ನೀಡಲಾಯಿತು. ಈಗಾಗಲೇ ಟೆಂಡರ್ ಪ್ರಕ್ರಿಯೆ ಮುಗಿದಿದ್ದು ಆದಷ್ಟು ಬೇಗ ಕೆಲಸ ಆರಂಭ ಮಾಡಲು ಗುತ್ತಿಗೆದಾರರಿಗೆ ಸೂಚನೆ‌ ನೀಡಲಾಯಿತು.
-ಶಿವಮೊಗ್ಗ ಸುತ್ತ ಉದ್ದೇಶಿಸಲಾಗಿರೋ 2 ಲೈನ್ ರಿಂಗ್ ರಸ್ತೆಗೆ ಸಂಬಂಧಿಸಿದಂತೆ ಇದ್ದ ರೈಲ್ವೇ ಭೂಸ್ವಾಧೀನಕ್ಕೆ ಇದ್ದ ಸಮಸ್ಯೆ ಬಗೆಹರಿಸಲಾಯಿತು. ಆದಷ್ಟು ಬೇಗ ರಿಂಗ್ ರಸ್ತೆ ನಿರ್ಮಾಣ ಮಾಡಲು ಸೂಚನೆ‌ ನೀಡಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next