Advertisement

ಮರಳು: ಕರಾವಳಿ ಶಾಸಕರ ಜತೆ ಸಭೆ

06:05 AM Dec 24, 2018 | Karthik A |

ಬೆಂಗಳೂರು: ಕರಾವಳಿ ಜಿಲ್ಲೆಗಳ ಮರಳಿನ ಸಮಸ್ಯೆ ನಿವಾರಣೆ ಕುರಿತಂತೆ ಗಣಿ ಮತ್ತು ಭೂವಿಜ್ಞಾನ ಸಚಿವ ರಾಜಶೇಖರ್‌ ಪಾಟೀಲ್‌ ಅವರು ಡಿ.28 ಅಥವಾ ಡಿ.29ರಂದು ಆ ಭಾಗದ ಶಾಸಕರು ಮತ್ತು ಡಿಸಿಗಳ ಜತೆ ಸಭೆ ನಡೆಸಲಿದ್ದಾರೆ. ಕರಾವಳಿ ಜಿಲ್ಲೆಗಳ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಚರ್ಚಿಸಲು ಡಿ.26ರಂದು ಕಾಲಾವಕಾಶ ನೀಡುವಂತೆ ಕರಾವಳಿ ಭಾಗದ ಶಾಸಕರು ಸಚಿವರಿಗೆ ಪತ್ರ ಬರೆದಿದ್ದರು. ಡಿ.26ಕ್ಕೆ ಪೂರ್ವನಿಗದಿತ ಕಾರ್ಯಕ್ರಮ ಇರುವುದಿಂದ ಡಿ. 28 ಅಥವಾ 29ರಂದು ಮಂಗಳೂರಿಗೆ ಬಂದು ಸಮಸ್ಯೆ ಬಗ್ಗೆ ಶಾಸಕರ ಸಮ್ಮುಖದಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂಬುದಾಗಿ ಸಚಿವರು ಭರವಸೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

Advertisement

ಬೆಳಗಾವಿ ಅಧಿವೇಶನದ ಅನಂತರ ಕರಾವಳಿ ಶಾಸಕರೆಲ್ಲ ಸಭೆ ಸೇರಿ, ಸಮಸ್ಯೆಯನ್ನು ಸರಕಾರದ ಗಮನಕ್ಕೆ ತರುವ ನಿಟ್ಟಿನಲ್ಲಿ ಸಚಿವರೊಂದಿಗೆ ಸಮಾಲೋಚನೆ ನಡೆಸಲು ಕಾಲಾವಕಾಶ ಕೋರಿದ್ದೆವು. ಸಚಿವರು ಡಿ. 28 ಅಥವಾ 29ರಂದು ಸಭೆ ನಡೆಸುವ ಭರವಸೆ ನೀಡಿದ್ದಾರೆ. ಸಭೆಯ ಅನಂತರ ಮುಂದಿನ ತೀರ್ಮಾನ ತೆಗೆದು ಕೊಳ್ಳ ಲಿದ್ದೇವೆ ಎಂದು ವಿಧಾನ ಸಭೆ ವಿಪಕ್ಷ ಮುಖ್ಯ ಸಚೇತಕ ವಿ. ಸುನಿಲ್‌ ಕುಮಾರ್‌ ‘ಉದಯವಾಣಿ’ಗೆ ತಿಳಿಸಿದರು.

ತಪ್ಪಿತಸ್ಥರ ವಿರುದ್ಧ ಕಠಿನ ಕ್ರಮ: ಸಿಎಂ
ರಾಯಚೂರಿನಲ್ಲಿ ಅಧಿಕಾರಿಯೊಬ್ಬರ ಮೇಲೆ ಲಾರಿ ಹರಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಒಬ್ಬರನ್ನು ಬಂಧಿಸಿದ್ದು, ಆರೋಪಿಗಳು ಎಷ್ಟೇ ಪ್ರಭಾವಿಗಳಾಗಿದ್ದರೂ ಕಠಿನ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಡಿಸಿಎಂ ಪರಮೇಶ್ವರ್‌ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next