Advertisement

ಡಿ.18ಕ್ಕೆ ಮೆಗಾ ಲೋಕ ಅದಾಲತ್‌

04:33 PM Nov 26, 2021 | Team Udayavani |

ಚಿಕ್ಕಬಳ್ಳಾಪುರ: ಡಿ.18ಕ್ಕೆ ನಡೆಯುವ ಮೆಗಾ ಲೋಕ ಅದಾಲತ್‌ನಲ್ಲಿ ಬಾಕಿ ಪ್ರಕರಣ ಇತ್ಯರ್ಥಗೊಳಿಸಿಕೊಳ್ಳಲು ಸುವರ್ಣ ಅವಕಾಶ ಕಲ್ಪಿಸಲಾಗಿದೆ ಎಂದು ನ್ಯಾಯಾಧೀಶ ಲಕ್ಷ್ಮೀಕಾಂತ್‌ ಜೆ. ಮಿಸ್ಟಿನ್‌ ಹೇಳಿದರು. ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಜಿಲ್ಲಾದ್ಯಂತ ಡಿ.18 ರಂದು ಮೆಗಾ ಲೋಕ ಅದಾಲತ್‌ ಹಮ್ಮಿಕೊಳ್ಳಲಾಗಿದೆ.

Advertisement

ಜಿಲ್ಲೆಯ ಎಲ್ಲಾ ಕೋರ್ಟ್‌ನಲ್ಲಿ ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ, ಬಾಕಿ ಇರುವ ಪ್ರಕರಣಗಳನ್ನು ಅತೀ ಶೀಘ್ರವಾಗಿ ಪರಿಹಾರ ಪಡೆದುಕೊಳ್ಳಬಹುದು ಎಂದು ಹಿರಿಯ ಸಿವಿಲ್‌ ನ್ಯಾಯಾಧೀಶ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯ ದರ್ಶಿ ಲಕ್ಷ್ಮೀಕಾಂತ್‌ ಜೆ.ಮಿಸ್ಟಿನ್‌ ತಿಳಿಸಿದರು.

ನಗರದ ಜಿಲ್ಲಾ ನ್ಯಾಯಾಲಯ ಸಭಾಂಗಣ ದಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತ ನಾಡಿದ ಅವರು, ಜಿಲ್ಲೆಯ ಕಕ್ಷಿದಾರರು ಇದರ ಸದುಪಯೋಗ ಪಡಿಸಿಕೊಂಡು ಪ್ರಕರಣ ಗಳಿಂದ ಶಾಶ್ವತವಾಗಿ ಪರಿಹಾರ ಕಂಡುಕೊಳ್ಳ ಬೇಕು ಎಂದು ಮನವಿ ಮಾಡಿದರು.

ಮೆಗಾ ಅದಾಲತ್‌ನಲ್ಲಿ ಪ್ರಕರಣವು ಇತ್ಯರ್ಥವಾದಲ್ಲಿ ವ್ಯಕ್ತಿಯು ನೆಮ್ಮದಿ ಜೀವನ ನಡೆಸಲು ಸಾಧ್ಯ. ಲೋಕ್‌ ಅದಾಲತ್‌ನಲ್ಲಿ ರಾಜಿಯಾದ ಪ್ರಕರಣಗಳ ಆದೇಶ ಅಂತಿಮವಾಗಿರುತ್ತದೆ. ಪ್ರಕರಣವು ಇತ್ಯರ್ಥವಾದ ಬಳಿಕ ಮೇಲ್ಮನವಿಗೆ ಅವಕಾಶ ಇರುವುದಿಲ್ಲ.

ಇದನ್ನೂ ;-  ಮಗ ಕಾಲೇಜಿಗೆ ಹೋದ ವೇಳೆ ಸೊಸೆ ಮೇಲೆ ಅತ್ಯಾಚಾರ ಎಸಗಿದ ಮಾವ: ಕೊಲೆ ಬೆದರಿಕೆ

Advertisement

ಹಾಗಾಗಿ, ಕೋರ್ಟ್‌ಗಳಲ್ಲಿ ಪ್ರಕರಣ ಹೊಂದಿರುವ ಸಾರ್ವಜನಿಕರು ಅದಾಲತ್‌ ನ ಪ್ರಯೋಜನ ಪಡೆದುಕೊಳ್ಳಬೇಕು ಎಂದು ವಿವರಿಸಿದರು. ವ್ಯಾಜ್ಯ ಪೂರ್ವ ಪ್ರಕರಣಗಳಾದ ಚೆಕ್‌ ಅಮಾನ್ಯ, ಆರ್ಥಿಕ ವಸೂಲಾತಿ, ಉದ್ಯೋಗ ದಲ್ಲಿ ಪುನರ್‌ ಸ್ಥಾಪಿಸಲ್ಪಡುವ, ಕಾರ್ಮಿಕ ವಿವಾದ, ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮುಗಳು, ವಿದ್ಯುತ್‌, ನೀರಿನ ಶುಲ್ಕಗಳು, ಜೀವನಾಂಶ ಪ್ರಕರಣಗಳನ್ನು (ರಾಜಿಯಾಗಬಲ್ಲ ಅಪರಾಧ, ವೈವಾಹಿಕ, ಕುಟುಂಬ ಹಾಗೂ ಇತರೆ ಸಿವಿಲ್‌ ಪ್ರಕರಣ ಗಳು) ಅದಾಲತ್‌ನಲ್ಲಿ ತೆಗೆದುಕೊಳ್ಳಲಾಗುವುದು ಎಂದು ವಿವರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next