Advertisement

Sandalwood; ‘ತತ್ಸಮ ತದ್ಭವ’ ಮೇಲೆ ಮೇಘನಾ- ಪ್ರಜ್ವಲ್ ನಿರೀಕ್ಷೆ

10:43 AM Sep 01, 2023 | Team Udayavani |

ಮೇಘನಾ ರಾಜ್‌, ಪ್ರಜ್ವಲ್‌ ದೇವರಾಜ್‌ ನಟಿಸಿರುವ “ತತ್ಸಮ ತದ್ಭವ’ ಚಿತ್ರ ಸೆ.15ರಂದು ಬಿಡುಗಡೆಯಾಗುತ್ತಿದೆ. ಮೊದಲ ಹಂತವಾಗಿ ಚಿತ್ರದ ಟ್ರೇಲರ್‌ ಇತ್ತೀಚೆಗೆ ಬಿಡುಗಡೆಯಾಗಿದೆ. ನಟರಾದ ಧ್ರುವ ಸರ್ಜಾ ಹಾಗೂ ಧನಂಜಯ್‌ ಚಿತ್ರದ ಟ್ರೇಲರ್‌ ರಿಲೀಸ್‌ ಮಾಡಿ ತಂಡಕ್ಕೆ ಶುಭಕೋರಿದರು.

Advertisement

“ತತ್ಸಮ ತದ್ಭವ’ ಸಿನಿಮಾ ಮೇಲೆ ಮೇಘನಾ ರಾಜ್‌ ನಿರೀಕ್ಷೆ ಇಟ್ಟಿದ್ದಾರೆ. ಅದಕ್ಕೆ ಕಾರಣ, ಸಿನಿಮಾದ ಕಂಟೆಂಟ್‌. ಚಿತ್ರದ ಬಗ್ಗೆ ಮಾತನಾಡುವ ಅವರು, “ನಾನು ಸಿನಿಮಾದಲ್ಲಿ ನಟಿಸಬಾರದು ಎಂದು ನಿರ್ಧರಿಸಿದಾಗ ಬಂದ ಸಿನಿಮಾವಿದು. ಈ ಚಿತ್ರ ಆರಂಭವಾಗಲು ಕಾರಣ ನನ್ನ ಪತಿ ಚಿರು. ಅವರಿಗೆ ಪ್ರಜ್ವಲ್‌ ಹಾಗೂ ಪನ್ನಗ ಅವರ ಜೊತೆ ಸೇರಿ ಸದಭಿರುಚಿಯ ಚಿತ್ರಗಳನ್ನು ನಿರ್ಮಾಣ ಮಾಡಬೇಕೆಂಬ ಆಸೆಯಿತ್ತು. ಆನಂತರ ಪನ್ನಗಾಭರಣ ಈ ಚಿತ್ರದ ಕಥೆಯನ್ನು ಹೇಳಲು ನಿರ್ದೇಶಕರನ್ನು ಮನೆಗೆ ಕಳುಹಿಸಿದರು. ಕಥೆ ಇಷ್ಟವಾಯಿತು. ಆ ಕಾರಣದಿಂದ ನಟಿಸಿದ್ದೇನೆ. ಪನ್ನಗಾಭರಣ, ಸ್ಫೂರ್ತಿ ಅನಿಲ್‌ ಹಾಗೂ ಚೇತನ್‌ ನಂಜುಂಡಯ್ಯ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ಪ್ರಜ್ವಲ್‌ ಅಭಿನಯಿಸಿದ್ದಾರೆ. ನಾನು ಈ ಚಿತ್ರ ಮಾಡಲು ಸಹಕಾರ ನೀಡಿದ ನನ್ನ ಎರಡು ಕುಟುಂಬಕ್ಕೆ ಧನ್ಯವಾದ’ ಎನ್ನುವುದು ಮೇಘನಾ ಮಾತು.

ಪ್ರಜ್ವಲ್‌ ದೇವರಾಜ್‌ ಕೂಡಾ ಈ ಸಿನಿಮಾದಲ್ಲಿ ನಟಿಸಿದ್ದಾರೆ. “ನಾನು ಈವರೆಗೂ ಮಾಡದ ಪಾತ್ರ ಈ ಚಿತ್ರದಲ್ಲಿ ಮಾಡಿದ್ದೇನೆ. ಬಹಳ ಇಷ್ಟಪಟ್ಟು ಮಾಡಿರುವ ಸಿನಿಮಾವಿದು. ಟ್ರೇಲರ್‌ಗೆ ನಮ್ಮ ತಂದೆ ದೇವರಾಜ್‌ ಅವರು ಧ್ವನಿ ನೀಡಿದ್ದಾರೆ’ ಎಂದರು.

“”ತತ್ಸಮ ತದ್ಭವ’ ಒಂದು ಕ್ರೈಮ್‌ ಥ್ರಿಲ್ಲರ್‌ ಚಿತ್ರ. ಆದರೆ ಮಾಮೂಲಿ ಕ್ರೈಮ್‌ ಥ್ರಿಲ್ಲರ್‌ಗಳಿಗಿಂತ ವಿಭಿನ್ನ. ನನ್ನ ಕಥೆ ಮೆಚ್ಚಿ ನಿರ್ಮಾಣ ಮಾಡಿರುವ  ರ್ಮಾಪಕರಿಗೆ, ಚಿತ್ರದಲ್ಲಿ ನಟಿಸಿರುವ ಕಲಾವಿದರಿಗೆ ಹಾಗೂ ತಂತ್ರಜ್ಞರಿಗೆ ನಾನು ಆಭಾರಿ’ ಎನ್ನುತ್ತಾರೆ ನಿರ್ದೇಶಕ ವಿಶಾಲ್‌ ಆತ್ರೇಯ.

ನಿರ್ಮಾಪಕ ಪನ್ನಗಾಭರಣ ಅವರಿಗೆ “ತತ್ಸಮ ತದ್ಭವ’ ತುಂಬಾ ವಿಶೇಷವಾದ ಚಿತ್ರ. “ನಾನು ನಿರ್ಮಾಪಕನಾಗಬೇಕು ಅಂತ ಇರಲಿಲ್ಲ. ಆದರೆ, ನಿರ್ಮಾಪಕನಾದೆ. ನನ್ನೊಟ್ಟಿಗೆ ಕೆಲವು ಸ್ನೇಹಿತರು ಕೈ ಜೋಡಿಸಿದರು. ಈಗ ಚಿತ್ರ ತೆರೆಗೆ ಬರಲು ಸಿದ್ಧವಾಗಿದೆ. ಸೆಪ್ಟೆಂಬರ್‌ 15 ಚಿತ್ರ ಬಿಡುಗಡೆಯಾಗಲಿದೆ’ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next