Advertisement
ಅವರಲ್ಲಿ ಹೆಚ್ಚಿನವರು ಉತ್ತರಭಾರತದಿಂದ ಬಂದವರು. “ದೇಖೋ ಬೆಹನ್ಜಿà…’ ಎಂದು ಮಾತಾಡಿಸುತ್ತಲೇ ಚಕಚಕನೆ ಕೈ ಮೇಲೆ ರಂಗು ಮೂಡಿಸುವ ನಿಪುಣರು.ರಾಜಸ್ಥಾನ, ಉತ್ತರಪ್ರದೇಶ, ದೆಹಲಿ… ಹೀಗೆ ಉತ್ತರ ಭಾರತದಿಂದ ಬೆಂಗಳೂರಿಗೆ ಬಂದವರು ಮದರಂಗಿಯಲ್ಲಿ ಬದುಕು ಕಂಡುಕೊಂಡಿರುವುದು ಹೇಗೆ ಎಂದು ಮೆಹಂದಿ ಡಿಸೈನರ್ ಜಿತೇಂದ್ರ ಕುಮಾರ್ ಹೀಗೆ ಹೇಳುತ್ತಾರೆ; “ನಾವು ಮೂಲತಃ ಆಗ್ರಾದವರು.
Related Articles
Advertisement
ಹಾಗಾಗಿ, ಇದೊಂಥರಾ ಧ್ಯಾನ, ತಪಸ್ಸಿಗೆ ಕುಳಿತಂತೆ! ಸಮಾರಂಭಗಳಿಗೆ ಕರೆಯುವವರು 15-20 ದಿನ ಮುಂಚೆ ಆರ್ಡರ್ ಬುಕ್ ಮಾಡಬೇಕು. ಆಗಮಾತ್ರ ಹೇಳಿದ ಸಮಯಕ್ಕೆ ಹೋಗಲು ಸಾಧ್ಯವಾಗುತ್ತದೆ. ಜಮ್ಮು ಕಾಶ್ಮೀರದ ವ್ಯಕ್ತಿಯೊಬ್ಬರಿಂದ ಈ ಕಸುಬು ಕಲಿತಿದ್ದು. ಈಗ ಬಾಂಬೆ ಕಟ್, ರಾಜಸ್ಥಾನಿ, ಮಾರ್ವಾಡಿ, ಭಾರತೀಯ ಶೈಲಿ, ಅರೇಬಿಕ್ ಶೈಲಿಯ ವಿನ್ಯಾಸಗಳನ್ನು ಬಿಡಿಸುತ್ತೇನೆ.
ಕರ್ವಾಚೌತ್, ದೀಪಾವಳಿ, ದಸರಾ ಮುಂತಾದ ಹಬ್ಬದ ಸಂದರ್ಭಗಳಲ್ಲಿ ಕೈ ತುಂಬಾ ಕೆಲಸವಿರುತ್ತದೆ. ಉಳಿದಂತೆ ದಿನಕ್ಕೆ 15-20 ಜನ ಬಂದು ಕೈಮೇಲೆ ಚಿತ್ತಾರ ಮೂಡಿಸಿಕೊಳ್ಳುತ್ತಾರೆ. ಕೆಲವೊಮ್ಮೆ ಗಿರಾಕಿಗಳಿಲ್ಲದೆ ಖಾಲಿ ಕುಳಿತದ್ದೂ ಇದೆ. ಇತ್ತೀಚೆಗೆ ಬ್ಯೂಟಿಪಾರ್ಲರ್ಗಳಲ್ಲಿಯೂ ಮೆಹಂದಿ ಹಾಕುವುದರಿಂದ ಬಿಸಿನೆಸ್ ಡಲ್ ಆಗುತ್ತಿದೆ. ಒಂದು ಕೈಗೆ 50 ರೂ. ಪಡೆಯುತ್ತೇವೆ.
4-5 ನಿಮಿಷದಲ್ಲಿ ಒಂದು ಕೈಗೆ ವಿನ್ಯಾಸ ಮೂಡಬಹುದು. ಬೆಳಗ್ಗೆ 9.30ರಿಂದ ರಾತ್ರಿ 9ರವರೆಗೆ ಕೆಲಸ ಮಾಡುತ್ತೇವೆ. ಇಲ್ಲಿನ ಜನರಿಂದ ಕನ್ನಡ ಮಾತಾಡುವುದನ್ನು ಕಲಿತಿದ್ದೇವೆ. ಇಂಗ್ಲಿಷ್ ಗೊತ್ತಿಲ್ಲ. ಗೊತ್ತಿದ್ದರೆ ನಮಗೂ ಬೇರೆ ಕೆಲಸ ಸಿಗುತ್ತಿತ್ತೇನೋ. ಅಕ್ಷರ ಗೊತ್ತಿಲ್ಲದ ನಮಗೆ ಈ ಚಿತ್ರಗಳೇ ಊಟ ಹಾಕುತ್ತಿರುವುದು. ವರ್ಷಕ್ಕೊಮ್ಮೆ ಊರಿಗೆ ಹೋಗಿ ಬರುತ್ತೇವೆ. ರಾಜಸ್ಥಾನದಿಂದ ಮದರಂಗಿ ಪುಡಿ ತರಿಸುತ್ತೇವೆ.
ಯಾಕಂದ್ರೆ ಬೇರೆಲ್ಲೂ ಅಂಥ ಮದರಂಗಿ ಸಿಗುವುದಿಲ್ಲ. ಹೊಟ್ಟೆಪಾಡಿಗೆ ಬ್ಯಾಗ್, ಬಟ್ಟೆ, ಫ್ಯಾನ್ಸಿ ವಸ್ತುಗಳ ಮಾರಾಟವನ್ನೂ ಮಾಡುತ್ತೇವೆ. ಈ ಕಲೆ ಬಿಸಿನೆಸ್ ಆಗಿರುವುದರಿಂದ ದೊಡ್ಡ ದೊಡ್ಡ ಮೆಹಂದಿ ಸೆಂಟರ್ಗಳ ಜೊತೆ ಸ್ಪರ್ಧಿಸುವುದು ಈಗ ಅನಿವಾರ್ಯವಾಗಿದೆ’. ಅಂದಹಾಗೆ, ಜಿತೇಂದ್ರ ಕುಮಾರ್ಗೆ (ಮೊ. 9740847266) ಬೆಂಗಳೂರೆಂದರೆ ಅತೀವ ಪ್ರೀತಿ. ಈ 15 ವರ್ಷಗಳಿಂದ “ಲಾಲಾ ಮೆಹಂದಿ ಆರ್ಟ್’ ಎಂಬ ಪುಟ್ಟ ಬ್ಯಾನರ್ ಕಟ್ಟಿಕೊಂಡು, ಮದರಂಗಿ ಬಿಡಿಸುತ್ತಿದ್ದಾರೆ. ಮಲ್ಲೇಶ್ವರಂನ ಜನತಾ ಹೋಟೆಲ್ ಎದುರು ಇವರು ಕೂತಿರುತ್ತಾರೆ.
ಮೆಹಂದಿ ಕಲಾವಿದರ ಬೀಡು: ಮಲ್ಲೇಶ್ವರಂ 8ನೇ ಕ್ರಾಸ್, ಜಯನಗರ 4ನೇ ಬ್ಲಾಕ್, ರಾಜಾಜಿನಗರ (ಕದಂಬ ಹೋಟೆಲ್ ಸಮೀಪ), ಕಮರ್ಷಿಯಲ್ ಸ್ಟ್ರೀಟ್, ಎಂ.ಜಿ. ರಸ್ತೆ, ವಿಜಯನಗರ ಮಾರುತಿ ಮಂದಿರ ಸಮೀಪ.
ಬೆಂಗಳೂರಿಗರು ಇಷ್ಟಪಡುವ ಟ್ರೆಂಡ್ಗಳು1. ಮದುವೆಯಾಗುವ ಹುಡುಗನ ಹೆಸರನ್ನು ಮದರಂಗಿಯ ಮಧ್ಯೆ ಮೂಡಿಸುತ್ತಿದ್ದ ಕಾಲವಿತ್ತು. ಆದರೆ ಈಗ ಹುಡುಗನ ಚಿತ್ರವನ್ನೇ ಬಿಡಿಸುವ (ಪೋಟ್ರೈಯ್ಟ್ ಮೆಹಂದಿ) ಟ್ರೆಂಡ್ ಶುರುವಾಗಿದೆ.
2. ದಿಬ್ಬಣ, ವಾಲಗದವರು ಹಾಗೂ ಇತರ ವಾದ್ಯಗಳ ಚಿತ್ರದ ಡಿಸೈನ್ಗೆ ಭಾರೀ ಬೇಡಿಕೆ ಇದೆ.
3. ಪ್ರೇಮಕ್ಕೆ ಹೆಸರಾದ ರಾಧಾ-ಕೃಷ್ಣರ ಚಿತ್ರವನ್ನು ಮದುಮಗಳ ಕೈ ಮೇಲೆ ಮೂಡಿಸುತ್ತಾರೆ.
4. ಬಣ್ಣ ಬಣ್ಣದ ಮದರಂಗಿಯ ಸ್ಟಿಕರ್ಗಳು ಮಾರುಕಟ್ಟೆಗೆ ಬಂದಿದ್ದು, ಧರಿಸುವ ಉಡುಪಿನ ಬಣ್ಣದ ಮೆಹಂದಿ ಸ್ಟಿಕರ್ನ್ನು ಕೈಗೆ ಅಂಟಿಸಿಕೊಳ್ಳಬಹುದು.
5. ಕೆಂಪು ಬಣ್ಣ ಬೇಸರವಾದವರಿಗಾಗಿ ವೈಟ್ ಮದರಂಗಿ ಕೂಡ ಇದೆ.
6. ಗಡಿಬಿಡಿಯಲ್ಲಿ ಮೆಹಂದಿ ಹಚ್ಚಿಕೊಳ್ಳುವವರಿಗಾಗಿ ಹೇಗೂ ಹೂ ಬಳ್ಳಿಯ ಡಿಸೈನ್ ಇದೆಯಲ್ಲ?
7. ಮದುಮಗಳ ಕಾಲಿನಲ್ಲಿ ಮೂಡುವ ಗರಿಬಿಚ್ಚಿದ ನವಿಲಿನ ಚಿತ್ರ ಹೊಸ ಟ್ರೆಂಡ್ ಸೃಷ್ಟಿಸಿದೆ.
8. ಹಾರ ಬದಲಾಯಿಸಿಕೊಳ್ಳುತ್ತಿರುವ ವಧು-ವರರ ಡಿಸೈನ್ಗೂ ಭಾರೀ ಬೇಡಿಕೆಯಿದೆ. * ಪ್ರಿಯಾಂಕಾ