Advertisement
ಹೊಸದಿಲ್ಲಿಯಲ್ಲಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ರನ್ನು ಭೇಟಿಯಾದ ಬಳಿಕ ಸಿಎಂ ಮೆಹಬೂಬಾ ಮುಫ್ತಿ ಮಾತನಾಡಿದರು. ಇತ್ತೀಚೆಗೆ 7 ಮಂದಿ ಅಮರನಾಥ ಯಾತ್ರಿಕರ ಮೇಲೆ ನಡೆದ ದಾಳಿಯನ್ನು ಪ್ರಸ್ತಾವಿಸಿದ ಸಿಎಂ, ಕೋಮು ಸಾಮರಸ್ಯ ಕದಡುವ ನಿಟ್ಟಿನಲ್ಲಿಯೇ ಅದನ್ನು ನಡೆಸಲಾಗಿದೆ ಎಂದು ಆರೋಪಿ ಸಿದ್ದಾರೆ. ಆದರೆ ದೇಶದ ಜನರು, ರಾಜಕೀಯ ಪಕ್ಷಗಳು ಒಕ್ಕೊರಲಿನಿಂದ ದಾಳಿಯನ್ನು ಖಂಡಿಸಿವೆ. ಜತೆಗೆ ಪೊಲೀಸರು, ಭದ್ರತಾ ಸಿಬಂದಿಗೆ ರಾಜಕೀಯ ಪಕ್ಷಗಳು ಹಾಗೂ ದೇಶದ ಜನತೆ ಬೆಂಬಲ ನೀಡಿದರೆ, ರಾಜ್ಯದ ಪರಿಸ್ಥಿತಿ ಸುಧಾರಿಸಲು ನೆರವಾಗಬಹುದು ಎಂದಿದ್ದಾರೆ. ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಜತೆಗೆ ಅವರು ಒಂದು ಗಂಟೆ ಕಾಲ ಮಾತುಕತೆ ನಡೆಸಿದ್ದಾರೆ.
Related Articles
ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಮಂಜಾಕೋಟ್ಗೆ ಹೊಂದಿಕೊಂಡಿರುವ ಗಡಿ ನಿಯಂತ್ರಣ ರೇಖೆಯ ಗುಂಟ ಪಾಕಿಸ್ಥಾನದ ಸೈನಿಕರು ಕದನ ವಿರಾಮ ಉಲ್ಲಂ ಸಿ, ಗುಂಡು ಹಾರಿಸಿದ್ದಾರೆ. ಇದರಿಂದಾಗಿ ಭಾರತೀಯ ಸೇನೆಯ ಸೈನಿಕರೊಬ್ಬರು ಹುತಾತ್ಮರಾಗಿದ್ದಾರೆ. ಅವರನ್ನು ಲ್ಯಾನ್ಸ್ ನಾಯಕ್ ಮೊಹಮ್ಮದ್ ನಸೀರ್ ಎಂದು ಗುರುತಿಸಲಾಗಿದೆ. ಅವರು ಪೂಂಛ… ಜಿಲ್ಲೆಯವರು. ಅದಕ್ಕೆ ಪ್ರತ್ಯುತ್ತರವಾಗಿ ಭಾರತೀಯ ಸೇನೆಯೂ ಗುಂಡು ಹಾರಿಸಿದೆ. ಇದಕ್ಕೂ ಮೊದಲು ಕುಲ್ಗಾಂವ್ನಲ್ಲಿ ಸಿಆರ್ಪಿಎಫ್ ವಾಹನದ ಮೇಲೆ ಉಗ್ರರು ಗುಂಡು ಹಾರಿಸಿದ್ದರಿಂದ ಯೋಧರೊಬ್ಬರು ಗಾಯಗೊಂಡಿದ್ದಾರೆ.
Advertisement
ಆರ್ಥಿಕ ಕಾರಿಡಾರ್ಗೆ ಭಾರತ ಅಡ್ಡಿ ಎಂದ ಪಾಕ್ ಸೇನಾಧಿಕಾರಿ
ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಶೀಘ್ರವೇ ಅನುಷ್ಠಾನಗೊಳ್ಳಲಿರುವ 45 ಸಾವಿರ ಕೋಟಿ ರೂ. ವೆಚ್ಚದ ಚೀನ-ಪಾಕಿಸ್ಥಾನ ಆರ್ಥಿಕ ಕಾರಿಡಾರ್ ಯೋಜನೆಗೆ ಭಾರತ ಅಡ್ಡಿ ಮಾಡಲು ಮುಂದಾಗಿದೆ. ಯೋಜನೆಯ ಅನ್ವಯ ರಸ್ತೆ, ರೈಲು ಮಾರ್ಗ ಗಳನ್ನು ನಿರ್ಮಿಸಲು ನಿರ್ಧರಿಸಲಾಗಿದೆ. ಅವುಗಳು ಕಾರ್ಯಗತವಾಗದಂತೆ ಭಾರತದ ರಿಸರ್ಚ್ ಆ್ಯಂಡ್ ಅನಾಲಿಸ್ ವಿಂಗ್ ಹಲವು ಯೋಜನೆಗಳನ್ನು ರೂಪಿಸಿದೆ ಎಂದು ಪಾಕಿಸ್ಥಾನ ಸೇನೆಯ ಜಂಟಿ ಮುಖ್ಯಸ್ಥರ ಸಮಿತಿಯ ಅಧ್ಯಕ್ಷ ಜ| ಜುಬೈರ್ ಮೆಹಮೂಬ್ ಹಯಾತ್ ದೂರಿದ್ದಾರೆ.