Advertisement

ಕಾಶ್ಮೀರ ಟೆನ್ಷನ್‌ ಲೋಕಸಭಾ ಚುನಾವಣೆವರೆಗೆ ಮಾತ್ರ

04:33 AM Mar 20, 2019 | Team Udayavani |

ಜಮ್ಮು ಕಾಶ್ಮೀರದ ಮಾಜೀ ಮುಖ್ಯಮಂತ್ರಿ ಮೆಹಬೂಬ ಮುಫ್ತಿ ಅವರು ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿ ಸುದ್ದಿಯಲ್ಲಿದ್ದಾರೆ. ಸದ್ಯಕ್ಕೆ ಭಾರತ ಮತ್ತು ಪಾಕಿಸ್ಥಾನದ ನಡುವೆ ಮೂಡಿರುವ ‘ಯುದ್ಧ ವಾತಾವರಣ’ ಲೋಕಸಭಾ ಚುನಾವಣೆವರೆಗೆ ಮಾತ್ರವೇ ಇರುತ್ತದೆ ಎಂದು ಅವರು ಹೇಳಿದ್ದಾರೆ. ಈ ಹೇಳಿಕೆಯನ್ನು ನೀಡುವ ಮೂಲಕ ಪಿಡಿಪಿ ನಾಯಕಿ ನೇರವಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸರಕಾರದ ನೀತಿಗಳ ವಿರುದ್ಧ ತಮ್ಮ ಅಸಮಧಾನವನ್ನು ವ್ಯಕ್ತಪಡಿಸಿದ್ದಾರೆ.

Advertisement

ಮೆಹಬೂಬಾ ಹೇಳಿದ್ದಿಷ್ಟು, ‘ದೇಶದಲ್ಲಿ ಲೋಕಸಭಾ ಚುನಾವಣೆಗಳು ಮುಗಿಯುವವರೆಗೂ ಭಾರತ-ಪಾಕಿಸ್ಥಾನ ಗಡಿಯಲ್ಲಿ ಗುಂಡಿನ ಚಕಮಕಿಗಳು ನಡೆಯುತ್ತಿರುತ್ತದೆ, ಮತ್ತು ಜಮ್ಮು ಕಾಶ್ಮೀರದ ಗಡಿಪ್ರದೇಶದಲ್ಲಿ ಹಾಗೂ ಇತರೇ ಭಾಗಗಳಲ್ಲಿ ಸೇನೆ ಮತ್ತು ಪೊಲೀಸ್‌ ತಮ್ಮ ತೋಳ್ಬಲ ಪ್ರದರ್ಶಿಸಲಿವೆ.’

Advertisement

Udayavani is now on Telegram. Click here to join our channel and stay updated with the latest news.

Next