Advertisement

ಮೇಕೆದಾಟು ಯೋಜನೆಗೆ ಜಲ ಶಕ್ತಿ : ಸದ್ಯದಲ್ಲೇ ಆರಂಭಕ್ಕೆ ಸಮ್ಮತಿ ಸಾಧ್ಯತೆ

01:41 AM Jul 14, 2021 | Team Udayavani |

ಬೆಂಗಳೂರು : ಮೇಕೆದಾಟು ಯೋಜನೆಗೆ ಸದ್ಯದಲ್ಲೇ ಕೇಂದ್ರ ಸರಕಾರ ಅನುಮತಿ ನೀಡುವ ಸಾಧ್ಯತೆಗಳಿವೆ.
ಈ ಬಗ್ಗೆ ರಾಜ್ಯ ಪ್ರವಾಸದಲ್ಲಿರುವ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್‌ ಶೇಖಾವತ್‌ ಸುಳಿವು ನೀಡಿದ್ದು, ಸದ್ಯದಲ್ಲೇ ಯೋಜನೆಗೆ ಅನುಮತಿ ನೀಡುವುದಾಗಿ ಭರವಸೆ ನೀಡಿದ್ದಾರೆ. ವಿಧಾನಸೌಧದಲ್ಲಿ ಸಿಎಂ ಯಡಿಯೂರಪ್ಪ, ರಾಜ್ಯದ ಸಚಿವರು ಮತ್ತು ಜಲ ಸಂಪನ್ಮೂಲ ಇಲಾಖೆಯ ಅಧಿಕಾರಿಗಳ ಜತೆ ಶೇಖಾವತ್‌ ಸಭೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಅಧಿಕಾರಿಗಳು ಮೇಕೆ ದಾಟು ಯೋಜನೆಯಿಂದ ಕರ್ನಾಟಕಕ್ಕಷ್ಟೇ ಅಲ್ಲದೆ ತಮಿಳುನಾಡಿಗೂ ಅನುಕೂಲವಾಗಲಿದೆ ಎಂಬ ಬಗ್ಗೆ ಜಲಶಕ್ತಿ ಸಚಿವರಿಗೆ ಮನವರಿಕೆ ಮಾಡಿಕೊಡುವಲ್ಲಿ ಸಫ‌ಲರಾಗಿದ್ದಾರೆ ಎಂದು ತಿಳಿದು ಬಂದಿದೆ. ಹೀಗಾಗಿ ಶೀಘ್ರವೇ ಅನುಮತಿ ನೀಡುವುದಾಗಿ ಶೇಖಾವತ್‌ ಭರವಸೆ ನೀಡಿದ್ದಾರೆ ಎನ್ನಲಾಗುತ್ತಿದೆ.

Advertisement

ಯೋಜನೆಗಳ ಬಗ್ಗೆ ಚರ್ಚೆ
ಕೇಂದ್ರದ ಮಟ್ಟದಲ್ಲಿ ಬಾಕಿ ಉಳಿದಿರುವ ಇತರ ಯೋಜನೆಗಳಿಗೂ ಶೀಘ್ರ ಅನುಮತಿ ನೀಡುವುದಾಗಿ ಶೇಖಾವತ್‌ ಹೇಳಿದ್ದಾರೆ. ರಾಜ್ಯದ ಅಧಿಕಾರಿಗಳಿಂದ ನೀರಾವರಿ ಯೋಜನೆಗಳ ಸಮಗ್ರ ಮಾಹಿತಿ ಪಡೆದು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎನ್ನಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next