Advertisement

Melukote: ಚೆಲುವನಾರಾಯಣಸ್ವಾಮಿಯ ಉತ್ಸವ… ಖಜಾನೆಯಿಂದ ವೈರಮುಡಿ ಕಿರೀಟ ರವಾನೆ

10:54 AM Mar 21, 2024 | Team Udayavani |

ಮಂಡ್ಯ: ಮೇಲುಕೋಟೆ ಪ್ರಖ್ಯಾತ ಶ್ರೀ ಚೆಲುವನಾರಾಯಣಸ್ವಾಮಿಯ ವೈರಮುಡಿ ಉತ್ಸವ ಹಿನ್ನಲೆಯಲ್ಲಿ ಜಿಲ್ಲಾ ಖಜಾನೆಯಿಂದ ವೈರಮುಡಿ ಹಾಗೂ ರಾಜಮುಡಿ ಕಿರೀಟ ರವಾನೆ ಮಾಡಲಾಯಿತು.

Advertisement

ಜಿಲ್ಲಾ ಖಜಾನೆಯಲ್ಲಿದ್ದ ವೈರಮುಡಿ ಕಿರೀಟಕ್ಕೆ ವಿಶೇಷ ಪೂಜೆ ಸಲ್ಲಿಸಿ ಪೊಲೀಸ್ ಬಿಗಿ ಭದ್ರತೆಯೊಂದಿಗೆ ಕೊಂಡೊಯ್ಯಲಾಯಿತು.

ಜಿಲ್ಲಾಧಿಕಾರಿ ಡಾ.ಕುಮಾರ, ಎಸ್ಪಿ ಎನ್.ಯತೀಶ್ ಹಾಗೂ ಜಿಪಂ ಸಿಇಒ ಶೇಖ್ ತನ್ವೀರ್ ಆಸಿಫ್ ನೇತೃತ್ವದಲ್ಲಿ ಮೇಲುಕೋಟೆ ಸ್ಥಾನೀಕರಿಂದ ವೈರಮುಡಿ ತಿರುವಾಭರಣ ಪೆಟ್ಟಿಗೆಗಳಿಗೆ ವಿಶೇಷ ಪೂಜೆ ಸಲ್ಲಿಕೆ ನಂತರ ಪೇಟೆಬೀದಿಯ ಶ್ರೀ ಲಕ್ಷ್ಮಿಜನಾರ್ಧನಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.

ವೈರಮುಡಿ ಸಾಗುವ ಮಾರ್ಗದುದ್ದಕ್ಕೂ ಬರುವ ಗ್ರಾಮಸ್ಥರಿಂದ ವಿಶೇಷ ಪೂಜೆ ಸಲ್ಲಿಸಲಾಯಿತು. ಮಾರ್ಗದುದ್ದಕ್ಕೂ ಪೊಲೀಸರ ಸರ್ಪಗಾವಲು ಹಾಕಿ ಭದ್ರತೆ ಒದಗಿಸಲಾಗಿತ್ತು.

ಇದನ್ನೂ ಓದಿ: ಫಾರಿನ್ ಟೂರ್ ಹೋಗಲು ಕಿಡ್ನಾಪ್ ನಾಟಕ… ತಂದೆಯ ಬಳಿ 30 ಲಕ್ಷಕ್ಕೆ ಬೇಡಿಕೆ ಇಟ್ಟ ಮಗಳು…

Advertisement
Advertisement

Udayavani is now on Telegram. Click here to join our channel and stay updated with the latest news.

Next