Advertisement

ಸ್ಮಾರಕ ಧ್ವಂಸ: ಪ್ರತಿಭಟನೆ

12:40 AM Feb 05, 2019 | |

ಹೊಸಪೇಟೆ: ಐತಿಹಾಸಿಕ ಹಂಪಿಯ ವಿಷ್ಣುದೇಗುಲ ಧ್ವಂಸಗೊಳಿಸಿದ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಬೇಕು ಹಾಗೂ ಹಂಪಿ ಸ್ಮಾರಕಗಳ ಸಂರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಮೈಸೂರು ಸಂಸ್ಥಾನ ಹಾಗೂ ಆನೆಗುಂದಿ ಸಂಸ್ಥಾನದ ಮಹಾರಾಜರ ನೇತೃತ್ವದಲ್ಲಿ ವಿಜಯನಗರ ಸ್ಮಾರಕ ಸಂಸ್ಕೃತಿ ಸಂರಕ್ಷಣಾ ಸೇನೆ ಪದಾಧಿಕಾರಿಗಳು ಸೋಮವಾರ ಪ್ರತಿಭಟನೆ ನಡೆಸಿದರು.

Advertisement

ತಾಲೂಕಿನ ಕಮಲಾಪುರದ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ಕಚೇರಿ ಮುಂಭಾಗದಲ್ಲಿ ಮೈಸೂರು ಮಹಾರಾಜ ಯದುವೀರ ಶ್ರೀಕಂಠದತ್ತ ಒಡೆಯರ್‌ ಹಾಗೂ ಆನೆಗುಂದಿ ಸಂಸ್ಥಾನದ ಮಹಾರಾಜ ಶ್ರೀಕೃಷ್ಣ ದೇವರಾಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಹಂಪಿಯಲ್ಲಿ ಪದೇಪದೆ ನಡೆಯುತ್ತಿರುವ ಸ್ಮಾರಕಗಳ ಧ್ವಂಸ ಘಟನೆಗಳಿಗೆ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿ, ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ಡೆಪ್ಯೂಟಿ ಸೂಪರಿಂಟೆಂ ಡೆಂಟ್ ಕಾಳಿಮುತ್ತು ಅವರಿಗೆ ಮನವಿ ಸಲ್ಲಿಸಿದರು.

ಸಮಗ್ರ ತನಿಖೆಗೆ ಸಿಎಂ ಸೂಚನೆ: ಐತಿಹಾಸಿಕ ಹಂಪಿ ವಿಷ್ಣು ದೇವಾಲಯ ಧ್ವಂಸ ಪ್ರಕರಣವನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಗಂಭೀರವಾಗಿ ಪರಿಗಣಿಸಿದ್ದು, ಸಮಗ್ರ ತನಿಖೆಗೆ ಪೊಲೀಸರಿಗೆ ಸೂಚನೆ ನೀಡಿದ್ದಾರೆ ಎಂದು ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್‌ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next