Advertisement

ಯೇಸು ಕ್ರಿಸ್ತರ ಕೊನೆಯ ಭೋಜನದ ಸ್ಮರಣೆ

12:17 PM Apr 14, 2017 | |

ಮಂಗಳೂರು/ಉಡುಪಿ: ಯೇಸು ಕ್ರಿಸ್ತರು ತಮ್ಮ ಕೊನೆಯ ಭೋಜನದ ವೇಳೆ 12 ಮಂದಿ ಶಿಷ್ಯರ ಪಾದ ತೊಳೆದು ಸೇವೆಯ ಸಂಸ್ಕಾರ ಪ್ರತಿಪಾದಿಸಿದುದರ ಸಂಕೇತವಾಗಿ ಕ್ರೈಸ್ತ ಚರ್ಚ್‌ಗಳಲ್ಲಿ ಗುರುವಾರ ಸಂಜೆ ಧರ್ಮಗುರು 12 ಜನ ಕ್ರೈಸ್ತರ ಪಾದಗಳನ್ನು ತೊಳೆದರು. 

Advertisement

ಮಂಗಳೂರಿನ ರೊಜಾರಿಯೋ ಕೆಥೆಡ್ರಲ್‌ನಲ್ಲಿ ಬಿಷಪ್‌ ರೆ| ಡಾ| ಅಲೋಶಿಯಸ್‌ ಪಾವ್‌É ಡಿ’ಸೋಜಾ, ಕಲ್ಯಾಣಪುರ ಮಿಲಾಗ್ರಿಸ್‌ ಕೆಥೆಡ್ರಲ್‌ನಲ್ಲಿ ಬಿಷಪ್‌ ರೆ| ಡಾ| ಜೆರಾಲ್ಡ್‌ ಐಸಾಕ್‌ ಲೋಬೊ ಪ್ರಕ್ರಿಯೆ ನಡೆಸಿದರು. 

ಫಾ| ಜೆ.ಬಿ. ಕ್ರಾಸ್ತಾ ಮತ್ತು ಇತರ ಧರ್ಮಗುರು ಉಪಸ್ಥಿತರಿದ್ದರು. ಮಂಗಳೂರಿನಲ್ಲಿ 6 ಪುರುಷರು, 6 ಮಹಿಳೆಯರು, ಕಲ್ಯಾಣಪುರದಲ್ಲಿ 7 ಪುರುಷರು, 5 ಮಹಿಳೆಯರ ಪಾದ ತೊಳೆಯಲಾಯಿತು. ಮಹಿಳೆಯರಿಗೂ ಸಮಾನ ಸ್ಥಾನಮಾನ ನೀಡಬೇಕು ಎಂದು ಪೋಪ್‌ ಫ್ರಾನ್ಸಿಸ್‌ ಅವರ ಆದೇಶದಂತೆ ಕಳೆದ ವರ್ಷದಿಂದ ಈ ಬದಲಾವಣೆ ಮಾಡಲಾಗಿತ್ತು. 

ಮಹಿಳೆಯರಿಗೆ ಸ್ಥಾನಮಾನ ಕಲ್ಪಿಸುವಾಗ ಯುವಜನರಿಗೆ, ವಯಸ್ಕರಿಗೆ, ರೋಗಿಗಳಿಗೆ ಹಾಗೂ ಧಾರ್ಮಿಕ ವ್ಯಕ್ತಿಗಳಿಗೂ ಪ್ರಾತಿನಿಧ್ಯ ನೀಡಲಾಗಿದ್ದು, ಅದರಂತೆ ಧರ್ಮ ಭಗಿನಿಯರೂ ಭಾಗವಹಿಸಿದ್ದರು. 

Advertisement

Udayavani is now on Telegram. Click here to join our channel and stay updated with the latest news.

Next