Advertisement

ಮೇರಾ ಪರಿವಾರ್‌ ಬಿಜೆಪಿ ಪರಿವಾರ್‌ ಅಭಿಯಾನ

06:31 AM Feb 13, 2019 | Team Udayavani |

ಬೆಂಗಳೂರು: ಬಿಜೆಪಿ ಕೇಂದ್ರ ಕಚೇರಿಯ ಸೂಚನೆಯಂತೆ ಕಾರ್ಯಕರ್ತರ ಮನೆ ಮೇಲೆ ಬಿಜೆಪಿ ಬಾವುಟ ಹಾರಿಸುವ ಮೇರಾ ಪರಿವಾರ್‌ ಬಿಜೆಪಿ ಪರಿವಾರ್‌ ಅಭಿಯಾನಕ್ಕೆ ಮಂಗಳವಾರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಚಾಲನೆ ನೀಡಿದರು.

Advertisement

ರಾಷ್ಟ್ರದ 5 ಕೋಟಿ ಹಾಗೂ ರಾಜ್ಯದ 75 ಲಕ್ಷ ಮನೆಗಳ ಮೇಲೆ ಬಿಜೆಪಿ ಬಾವುಟ ಹಾರಿಸುವ ಮತ್ತು ಮನೆಗಳಿಗೆ ಬಿಜೆಪಿ ಲಾಂಚನದ ಸ್ಟಿಕ್ಕರ್‌ ಅಂಟಿಸುವ ಮೇರಾ ಪರಿವಾರ್‌ ಬಿಜೆಪಿ ಪರಿವಾರ್‌ ಅಭಿಯಾನಕ್ಕೆ ನಗರದ ಡಾಲರ್ಸ್‌ ಕಾಲೋನಿಯ ತಮ್ಮ ನಿವಾಸದ ಮೇಲೆ ಪಕ್ಷದ ಬಾವುಟ ಹಾರಿಸುವ ಮೂಲಕ ಚಾಲನೆ ನೀಡಿದರು.

ನಂತರ ಮಾತನಾಡಿ, ದೇಶಾದ್ಯಂತ ಬಿಜೆಪಿಯ ಎಲ್ಲ ಕಾರ್ಯಕರ್ತರ ಮನೆಗಳಲ್ಲಿ ಪಕ್ಷದ ಬಾವುಟ ಹಾರಿಸುವ ಕಾರ್ಯಕ್ರಮ ನಡೆದಿದೆ. ಅದರಂತೆ ರಾಜ್ಯದಲ್ಲೂ ವ್ಯಾಪಕವಾಗಿ ಅಭಿಯಾನ ನಡೆದಿದೆ. ರಾಜ್ಯದ ಕನಿಷ್ಠ 70 ಲಕ್ಷ ಮನೆಗಳಲ್ಲಿ ಪಕ್ಷದ ಧ್ವಜ ಹಾರಿಸುವ ಗುರಿ ಇಟ್ಟುಕೊಂಡಿದ್ದೇವೆ ಎಂದು ಹೇಳಿದರು.

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 22 ಸ್ಥಾನಗಳನ್ನು ಗೆಲ್ಲುವುದು ನಿಶ್ಚಿತ. ರಾಜ್ಯದ ಎಲ್ಲ ಕಡೆ ಬಿಜೆಪಿ ಪರ ವಾತಾವರಣವಿದೆ. ಕೇಂದ್ರದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬಂದು ನರೇಂದ್ರ ಮೋದಿ ಎರಡನೇ ಬಾರಿಗೆ ಪ್ರಧಾನಿಯಾಗುವುದು ಖಚಿತ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಮಾಜಿ ಸಚಿವ ಗೋವಿಂದ ಕಾರಜೋಳ, ವಿಧಾನ ಪರಿಷತ್‌ ಸದಸ್ಯರಾದ ವೈ.ಎ.ನಾರಾಯಣಸ್ವಾಮಿ, ತೇಜಸ್ವಿನಿ ಗೌಡ, ಯುವಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜಯೇಂದ್ರ ಇದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next