Advertisement

Arrest: ಬೆಳಗಾವಿಯಲ್ಲಿ ಎಂಇಎಸ್ ಮುಖಂಡ ಶುಭಂ ಶೇಳಕೆ ಬಂಧನ

08:25 AM Mar 13, 2024 | Team Udayavani |

ಬೆಳಗಾವಿ: ಕನ್ನಡ-ಮರಾಠಿ ಭಾಷೆ ಮಧ್ಯೆ ವಿಷ ಬೀಜ ಬಿತ್ತುತ್ತಿರುವ ಹಾಗೂ ಭಾಷಾ ವೈಶಮ್ಯಕ್ಕೆ ಕಾರಣವಾಗುತ್ತಿರುವ ಎಂಇಎಸ್ ಯುವ ಮುಖಂಡ ಶುಭಂ ಶೇಳಕೆಯನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

Advertisement

ಬೆಳಗಾವಿ ನಗರದ ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಸಿ ಅಶಾಂತಿ ಉಂಟು ಮಾಡುತ್ತಿರುವ ಆರೋಪದ ಮೇಲೆ ಶುಭಂ ಶೇಳಕೆಯನ್ನು ಮಾಳಮಾರುತಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಈಗಾಗಲೇ ಶುಭಂ ಶೇಳಕೆ ಮೇಲೆ ಖಡೇಬಜಾರ್, ಕ್ಯಾಂಪ್, ಮಾರ್ಕೆಟ್ ಠಾಣೆ ಸೇರಿದಂತೆ ವಿವಿಧ ಠಾಣೆಗಳಲ್ಲಿ‌ ಪ್ರಕರಣಗಳು ದಾಖಲಾಗಿವೆ. ಈಗ ಇಂಥದ್ದೇ ಪ್ರಕರಣದಲ್ಲಿ ಶೇಳಕೆಯನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next