Advertisement
ಬೆಳಗಾವಿಯಲ್ಲಿ ಕರ್ನಾಟಕ ರಾಜ್ಯೋತ್ಸವವನ್ನು ವಿರೋಧಿಸಲು ಎಂಇಎಸ್ ಕಾರ್ಯಕರ್ತರು ಕರಾಳ ದಿನ ಆಚರಿಸಿ ಕಪ್ಪು ಪಟ್ಟಿ ಕಟ್ಟಿಕೊಂಡು ರ್ಯಾಲಿ ನಡೆಸುತ್ತಾರೆ. ಈ ಸಲವೂ ಪ್ರತಿಭಟನೆ ನಡೆಸಲು ಎಂಇಎಸ್ ಸಿದ್ಧತೆ ಮಾಡಿಕೊಳ್ಳುತ್ತಿದೆ. ಜಿಲ್ಲಾಡಳಿತ ಇದುವರೆಗೆ ಅನುಮತಿ ನೀಡಿಲ್ಲ.
ನ.1ರಂದು ಎಂಇಎಸ್ನ ಕರಾಳ ದಿನಾಚರಣೆಗೆ ಜಿಲ್ಲಾಡಳಿತ ಅನುಮತಿ ನೀಡಿಲ್ಲ. ಆದರೂ ಮಹಾರಾಷ್ಟ್ರದ ನಾಯಕರು ಬೆಳಗಾವಿಗೆ ಹೋಗುತ್ತಾರೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಅನುಮತಿ ಇಲ್ಲದಿದ್ದರೂ ಬೆಳಗಾವಿಯಲ್ಲಿ ಅಶಾಂತಿ ಸೃಷ್ಟಿಸಲು ಬರುವ ನಾಯಕರಿಗೆ ಅವಕಾಶ ನೀಡಬಾರದು. ಕನ್ನಡ ಹಬ್ಬದ ಸಂದರ್ಭದಲ್ಲಿ ಕರಾಳ ದಿನಾಚರಣೆಗೆ ಅನುಮತಿ ನೀಡಬಾರದು ಎಂದು ವಿವಿಧ ಕನ್ನಡ ಸಂಘಟನೆಗಳ ಮುಖಂಡರು ಆಗ್ರಹಿಸಿದ್ದಾರೆ.
Related Articles
ಪೊಲೀಸ್ ಆಯುಕ್ತರು
ಈ ಬಾರಿ ಕರಾಳ ದಿನಾಚರಣೆಗೆ ಸೈಕಲ್ ರ್ಯಾಲಿ ನಡೆಸಲು ಅನುಮತಿ ನೀಡುವಂತೆ ಆಗ್ರಹಿಸಿ ಎಂಇಎಸ್ ಕಾರ್ಯಕರ್ತರು ಮಹಾನಗರ ಪೊಲೀಸ್ ಆಯುಕ್ತರಿಗೆ ಸೋಮವಾರ ಮನವಿ ಸಲ್ಲಿಸಿದ್ದು, ಆಯುಕ್ತರು ಅನುಮತಿ ನಿರಾಕರಿಸಿದ್ದಾರೆ. 67 ವರ್ಷದಿಂದ ನಾವು ನ.1ರಂದು ಸೈಕಲ್ ರ್ಯಾಲಿ ನಡೆಸಿಕೊಂಡು ಬಂದಿದ್ದೇವೆ. ಈ ಸಲವೂ ಇದಕ್ಕೆ ಜಿಲ್ಲಾಡಳಿತ ಅನುಮತಿ ನೀಡಬೇಕು. ಧರ್ಮವೀರ ಸಂಭಾಜಿ ವೃತ್ತದಿಂದ ಅಂದು ಬೆಳಗ್ಗೆ 9 ಗಂಟೆಗೆ ರ್ಯಾಲಿ ಆರಂಭವಾಗಿ ನಗರದ ಪ್ರಮುಖ ಮಾರ್ಗದಲ್ಲಿ ಸಾಗಿ ಮರಾಠಾ ಮಂದಿರದಲ್ಲಿ ಮುಕ್ತಾಯವಾಗಲಿದೆ. ಕೂಡಲೇ ಇದಕ್ಕೆ ಅನುಮತಿ ನೀಡುವಂತೆ ಕೋರಿದರು. ಇದಕ್ಕೆ ಪ್ರತಿಕ್ರಿಯಿಸಿರುವ ಪೊಲೀಸ್ ಕಮಿಷನರ್ ಸಿದ್ದರಾಮಪ್ಪ, ಕರಾಳ ದಿನಾಚರಣೆ ನಡೆಸಲು ಅನುಮತಿ ನೀಡುವುದಿಲ್ಲ ಎಂದು ತಿರಸ್ಕರಿಸಿದ್ದಾರೆ.
Advertisement