Advertisement

ಪ್ರಯಾಗ್‌ರಾಜ್‌ ಘಟನೆ ಬೆನ್ನಲ್ಲೇ ಪತ್ರಕರ್ತರ ಸುರಕ್ಷತೆಗಾಗಿ SOPs ಸಿದ್ಧಪಡಿಸಲಿರುವ MHA

04:40 PM Apr 16, 2023 | Team Udayavani |

ನವದೆಹಲಿ: ಪ್ರಯಾಗ್‌ರಾಜ್‌ನಲ್ಲಿ ದರೋಡೆಕೋರ-ರಾಜಕಾರಣಿ ಅತಿಕ್ ಅಹ್ಮದ್ ಮತ್ತು ಆತನ ಸಹೋದರ ಅಶ್ರಫ್ ಹತ್ಯೆಗೈದ ಮೂವರು ದಾಳಿಕೋರರು ಮಾಧ್ಯಮದವರಂತೆ ನಟಿಸಿದ ಹಿನ್ನೆಲೆಯಲ್ಲಿ ಪತ್ರಕರ್ತರ ಸುರಕ್ಷತೆ ಮತ್ತು ಭದ್ರತೆಗಾಗಿ ಪ್ರಮಾಣಿತ ಕಾರ್ಯಾಚರಣಾ ಕಾರ್ಯವಿಧಾನಗಳನ್ನು ಸಿದ್ಧಪಡಿಸಲು ಕೇಂದ್ರ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.

Advertisement

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮಾರ್ಗದರ್ಶನದಲ್ಲಿ ಗೃಹ ವ್ಯವಹಾರಗಳ ಸಚಿವಾಲಯ (MHA), ಪತ್ರಕರ್ತರ ಸುರಕ್ಷತೆ ಮತ್ತು ಭದ್ರತೆಗಾಗಿ ಪ್ರಮಾಣಿತ ಕಾರ್ಯಾಚರಣಾ ಕಾರ್ಯವಿಧಾನಗಳನ್ನು (SOP) ಸಿದ್ಧಪಡಿಸುತ್ತದೆ.

ಶನಿವಾರ ರಾತ್ರಿ ಪ್ರಯಾಗ್‌ರಾಜ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ವೇಳೆ ಮೂವರು ದುಷ್ಕರ್ಮಿಗಳು ಅಹ್ಮದ್ ಮತ್ತು ಆತನ ಸಹೋದರ ಅಶ್ರಫ್ ಅವರನ್ನು ಪತ್ರಕರ್ತರ ಸೋಗಿನಲ್ಲಿ ಬಂದು ಗುಂಡಿನ ದಾಳಿ ನಡೆಸಿ ಹತ್ಯೆಗೈಯಲಾಗಿತ್ತು. ಪೊಲೀಸ್ ಸಿಬ್ಬಂದಿ ತಪಾಸಣೆಗಾಗಿ ವೈದ್ಯಕೀಯ ಕಾಲೇಜಿಗೆ ಕರೆದೊಯ್ಯುತ್ತಿದ್ದಾಗ ಮಾಧ್ಯಮ ಸಂವಾದದ ಮಧ್ಯದಲ್ಲಿ ಘಟನೆ ನಡೆದಿತ್ತು.

Advertisement

Udayavani is now on Telegram. Click here to join our channel and stay updated with the latest news.

Next