Advertisement

ಉಡುಪಿ ಜಿಲ್ಲೆಯ ಬಿಸಿಯೂಟಕ್ಕೆ ಶಿವಮೊಗ್ಗ, ದ.ಕ. ಜಿಲ್ಲೆಯಿಂದ ಅಕ್ಕಿ

11:44 PM Feb 14, 2023 | Team Udayavani |

ಕುಂದಾಪುರ: ಉಡುಪಿ ಜಿಲ್ಲೆಯ ಶಾಲಾ ಮಕ್ಕಳ ಮುಂದಿನ ತಿಂಗಳ ಬಿಸಿಯೂಟಕ್ಕೆ ದ.ಕ. ಹಾಗೂ ಶಿವಮೊಗ್ಗ ಜಿಲ್ಲೆಯಿಂದ ಅಕ್ಕಿ ತರಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ಜಿ. ಪಂ.ಸಿಇಒ ಎಚ್‌. ಪ್ರಸನ್ನ ತಿಳಿಸಿದ್ದಾರೆ.

Advertisement

ಶಾಲೆಗಳಲ್ಲಿ ಬಿಸಿಯೂಟಕ್ಕೆ ಅಕ್ಕಿ ಕೊರತೆ ಸಾಧ್ಯತೆ? ಎಂದು “ಉದಯವಾಣಿ’ ಜ. 28ರಂದು ವರದಿ ಪ್ರಕಟಿಸಿತ್ತು. ಭಾರತ ಆಹಾರ ನಿಗಮ (ಫ‌ುಡ್‌ ಕಾರ್ಪೊರೇಶನ್‌ ಆಫ್ ಇಂಡಿಯಾ) ಗೋದಾಮಿನಿಂದ ಕರ್ನಾಟಕ ಆಹಾರ ನಿಗಮದ ಮೂಲಕ ಶಾಲೆಗಳಿಗೆ ಅಕ್ಕಿ, ಬೇಳೆ ಸರಬರಾಜು ಆಗುತ್ತದೆ. 4ನೇ ತ್ತೈಮಾಸಿಕ ಅವಧಿಯ (ಜನವರಿ-ಮಾರ್ಚ್‌) ಜನವರಿ ಮುಗಿಯುತ್ತ ಬಂದರೂ ಅವಶ್ಯವಿರುವ ಅಕ್ಕಿ ಇನ್ನೂ ಶಾಲೆಗೆ ತಲುಪಿಲ್ಲ. ಉಡುಪಿ ಜಿಲ್ಲೆಗೆ 1ರಿಂದ 5ನೇ ತರಗತಿ ವರೆಗೆ 290 ಮೆಟ್ರಿಕ್‌ ಟನ್‌ ಅಕ್ಕಿ, 6ರಿಂದ 8ನೇ ತರಗತಿಗೆ 235.5 ಮೆಟ್ರಿಕ್‌ ಟನ್‌ ಅಕ್ಕಿ ಬಿಡುಗಡೆಯಾಗಿದೆ.

ಮಣಿಪಾಲದ ಪೆರಂಪಳ್ಳಿಯಲ್ಲಿ ಇರುವ ಆಹಾರ ನಿಗಮ ಗೋದಾಮಿನಲ್ಲಿ ಕಾಂಕ್ರಿಟ್‌ ಕಾಮಗಾರಿ ನಡೆದ ಕಾರಣ ವಾಹನಗಳ ಓಡಾಟಕ್ಕೆ ನಿರ್ಬಂಧ ವಿಧಿಸಿದ್ದು, ಅಕ್ಕಿ ಸರಬರಾಜು ಆಗಿರಲಿಲ್ಲ. ಈ ಬಗ್ಗೆ ಉದಯವಾಣಿ ಗಮನ ಸೆಳೆದಿತ್ತು. ಇದೀಗ ದ.ಕ. ಜಿಲ್ಲೆ ಹಾಗೂ ಶಿವಮೊಗ್ಗ ಜಿಲ್ಲೆಯಿಂದ ಅಕ್ಕಿ ತರಿಸಲು ಜಿಲ್ಲಾಡಳಿತ ವ್ಯವಸ್ಥೆ ಮಾಡಿದೆ. ಇದಕ್ಕಾಗಿ 5 ಲಕ್ಷ ರೂ. ಸಾಗಾಟ ವೆಚ್ಚ ಹೆಚ್ಚುವರಿಯಾಗಿ ಹೊರೆಯಾಗಲಿದೆ. ಪೂರ್ವಾಲೋಚನೆ ಇಲ್ಲದೆ, ಜಿಲ್ಲಾಡಳಿತಕ್ಕೆ, ಶಿಕ್ಷಣ ಇಲಾಖೆಗೆ ಮಾಹಿತಿ ನೀಡದೆ ಕಾಮಗಾರಿ ನಡೆಸಿದ ಕಾರಣ ಈ ಗೊಂದಲ ಉಂಟಾಗಿದೆ. ಅಕ್ಕಿ ಸರಬರಾಜು ವಿಳಂಬವಾದರೆ ಶಾಲೆಗಳಲ್ಲಿ ಬಿಸಿಯೂಟ ಸ್ಥಗಿತವಾಗುವ ಆತಂಕ ಇತ್ತು. ಸೋಮವಾರದಿಂದ ಅಕ್ಕಿ ಸರಬರಾಜು ಆಗಲಿದೆ.

Advertisement

Udayavani is now on Telegram. Click here to join our channel and stay updated with the latest news.

Next