Advertisement

ಏರ್‌ಪೋರ್ಟ್‌ನಲ್ಲಿ ವಲಸೆ ಕಾರ್ಮಿಕರ ಕಲ್ಲುತೂರಾಟ

04:23 PM May 04, 2020 | Suhan S |

ದೇವನಹಳ್ಳಿ: ತಾಲೂಕಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ 2ನೇ ಟರ್ಮಿನಲ್‌ ನಿರ್ಮಾಣ ಮಾಡುತ್ತಿರುವ ಕಾರ್ಮಿಕರು ಏರ್‌ ಪೋರ್ಟ್‌ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ನಡೆದಿದೆ.

Advertisement

ಜಾರ್ಖಂಡ್‌ ಮೂಲದ ವಲಸೆ ಕಾರ್ಮಿಕರಿಗೆ ಮಾತ್ರ ಊರಿಗೆ ಹೋಗಲು ಅವಕಾಶ ಎಂದು ಅಧಿಕಾರಿಗಳು ತಿಳಿಸಿದ್ದ ರಿಂದ ವಿವಿಧ ರಾಜ್ಯದವರು ಜಾರ್ಖಂಡ್‌ ಮೂಲದ ಕಾರ್ಮಿಕರಿಗೆ ಮಾತ್ರ ಏಕೆ ಅವಕಾಶ ನೀಡುತ್ತಿದ್ದೀರಿ ಎಂದು ಮಾತಿನ ಚಕಮಕಿ ನಡೆಸಿದಾಗ ವಿಕೋಪಕ್ಕೆ ತಿರುಗಿ ಪೊಲೀಸರು, ಅಧಿಕಾರಿಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಕಲ್ಲು ತೂರಾಟದಲ್ಲಿ 2 ಹೊಯ್ಸಳ ಕಾರು ಜಖಂಗೊಂಡಿದ್ದು ಮೂವರು ಪೇದೆಗಳು ಗಾಯಗೊಂಡಿದ್ದಾರೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ದ 2ನೇ ಟರ್ಮಿನಲ್‌ ನಿರ್ಮಾಣ ಕಾರ್ಯದಲ್ಲಿ 3 ಸಾವಿರಕ್ಕೂ ಹೆಚ್ಚಿನ ವಲಸೆ ಕಾರ್ಮಿಕರು ತೊಡಗಿದ್ದರು ಎನ್ನಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next