Advertisement

ಕೊಯ್ನಾ ಜಲಾಶಯ ವ್ಯಾಪ್ತಿಯಲ್ಲಿ ಲಘು ಭೂಕಂಪ: ಆತಂಕದಲ್ಲಿ ಬೆಳಗಾವಿ ಜನತೆ

09:56 AM Aug 03, 2019 | keerthan |

ಬೆಳಗಾವಿ: ಮಹಾರಾಷ್ಟ್ರದ ಕೊಯ್ನಾ ಜಲಾಶಯದ ವ್ಯಾಪ್ತಿಯಲ್ಲಿ ಲಘು ಭೂಕಂಪವಾಗಿದ್ದು, ರಿಕ್ಟರ್‌ ಮಾಪಕದಲ್ಲಿ 3.9 ಪ್ರಮಾಣದಲ್ಲಿ ದಾಖಲಾಗಿದೆ.

Advertisement

ಕೊಯ್ನಾ ಜಲಾಶಯದಿಂದ ಹೆಚ್ಚಿನ ಪ್ರಮಾಣದಲ್ಲಿ ಕೃಷ್ಣಾ ನದಿಗೆ ನೀರು ಬಿಡುವ ಸಾಧ್ಯತೆ ಹೆಚ್ಚಾಗಿದ್ದು, ಜಿಲ್ಲೆಯ ಕೃಷ್ಣಾ ನದಿ ಪಾತ್ರದ ತಾಲೂಕಿನ ಜನತೆ ಆತಂಕಕ್ಕೆ ಒಳಗಾಗಿದ್ದಾರೆ.

ಮಹಾರಾಷ್ಟ್ರದ ಅಂಬೋಲಿ ಘಟ್ಟ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದ್ದು, ಇದರಿಂದಾಗಿ ಜಿಲ್ಲೆಯ ಹಿಡಕಲ್‌ ಜಲಾಶಯಕ್ಕೆ ನೀರಿನ ಹರಿವು ಹೆಚ್ಚಾಗಿದೆ. ಜಲಾಶಯಕ್ಕೆ 23 ಸಾವಿರ ಕ್ಯೂಸೆಕ್ಸ್‌ ಗೂ ಅಧಿಕ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ಒಂದೇ ದಿನದಲ್ಲಿ ಜಲಾಶಯದಲ್ಲಿ ಮೂರು ಅಡಿಯಷ್ಟು ನೀರು ಹೆಚ್ಚಳವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next