Advertisement

ಸೇನಾಪಡೆಗಳ ಎನ್ ಕೌಂಟರ್ ಗೆ ಉಗ್ರ ಬಲಿ: ಮುಂದುವರೆದ ಶೋಧಕಾರ್ಯ

10:10 AM Oct 30, 2019 | Team Udayavani |

ಜಮ್ಮು-ಕಾಶ್ಮೀರ: ಇಂದು ಮುಂಜಾನೆ ನಡೆದ ಕಾರ್ಯಾಚರಣೆಯಲ್ಲಿ ಸೇನಾಪಡೆಗಳು ಅನಂತ್​ನಾಗ್​ ಜಿಲ್ಲೆಯಲ್ಲಿ ಉಗ್ರನೋರ್ವನನ್ನು ಹೊಡೆದುರುಳಿಸಿದ್ದಾರೆ. ಮತ್ತಿಬ್ಬರು ಉಗ್ರರು ಪರಾರಿಯಾಗಿದ್ದು ತೀವ್ರ ಶೋಧ ಕಾರ್ಯ ನಡೆಸಲಾಗುತ್ತಿದೆ.

Advertisement

ಕಣಿವೆ ರಾಜ್ಯದಲ್ಲಿ ಉಗ್ರರ ಉಪಟಳ ಹೆಚ್ಚಾಗಿದ್ದು, ಭಯೋತ್ಪಾದಕರ ದಾಳಿಗೆ ಇತ್ತೀಚಿಗೆ ಲಾರಿ ಚಾಲಕನೊಬ್ಬ  ಬಲಿಯಾಗಿದ್ದ. ದಕ್ಷಿಣ ಕಾಶ್ಮೀರದ ಅನಂತ್​ನಾಗ್​ ಜಿಲ್ಲೆಯ ಬಿಜ್​ಬೆಹರಾದಲ್ಲಿ ಉಗ್ರರು ಚಾಲಕನನ್ನು ಗುಂಡು ಹಾರಿಸಿ ಹತ್ಯೆ ಮಾಡಿದ್ದರು. ಆ ದಾಳಿಯ ಪ್ರಮುಖ ಉಗ್ರನೋರ್ವನನ್ನು ಇಂದು ಸೇನಾ ಪಡೆಗಳು ಎನ್ ಕೌಂಟರ್ ನಡೆಸಿ ಹೊಡೆದುರುಳಿಸಿದ್ದಾರೆ.

ದಕ್ಷಿಣ ಕಾಶ್ಮೀರದಲ್ಲಿ ಕಳೆದ 2 ವಾರಗಳಿಂದ ಈಚೆಗೆ ನಡೆದ ಉಗ್ರರ ದಾಳಿಗೆ 6 ಮಂದಿ ಟ್ರಕ್ ಚಾಲಕರು ಸಾವನ್ನಪ್ಪಿದ್ದಾರೆ. ಕಾಶ್ಮೀರರೇತರನ್ನೇ ಗುರಿಯಾಗಿಸಿಕೊಂಡು ಉಗ್ರರು ದಾಳಿ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರು ನಿನ್ನೆ ಹೊರ ರಾಜ್ಯಗಳ ಟ್ರಕ್ ಚಾಲಕರನ್ನು ಶೋಫಿಯಾನ್ ನಗರದಿಂದ ಹೊರ ಕಳಿಸಲು ಮುಂದಾಗಿದ್ದರು. ಮರುದಿನವೇ ಮತ್ತೊಂದು ದಾಳಿ ನಡೆದಿದೆ.

ಯುರೋಪಿಯನ್ ಯೂನಿಯನ್ ನಿಯೋಗ ಇಂದು ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡಲಿದ್ದು ಆ ಹಿನ್ನಲೆಯಲ್ಲಿ ಭಾರೀ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಈ ನಿಯೋಗ 370 ನೇ ವಿಧಿ ರದ್ದು ಪಡಿಸಿದ ನಂತರ ಜಮ್ಮು-ಕಾಶ್ಮೀರದಲ್ಲಿನ ವಸ್ತುಸ್ಥಿತಿಯ ಕುರಿತು ಅಧ್ಯಯನ ಮಾಡಲಿದೆ.

Advertisement

Udayavani is now on Telegram. Click here to join our channel and stay updated with the latest news.

Next