Advertisement

ಸಚಿವ ಕೆ.ಎಸ್.ಈಶ್ವರಪ್ಪ ಹೆಸರಲ್ಲಿ ಲಕ್ಷಾಂತರ ರೂ. ವಂಚನೆ: ಐವರ ವಿರುದ್ಧ ದೂರು

10:27 AM Oct 05, 2021 | Team Udayavani |

ಶಿವಮೊಗ್ಗ: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ಹೆಸರು ದುರ್ಬಳಕೆ ಮಾಡಿಕೊಂಡು ಲಕ್ಷಾಂತರ ರೂ. ವಂಚನೆ ಮಾಡಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ಐವರ ವಿರುದ್ಧ ಪ್ರಕರಣ ದಾಖಲಾಗಿದೆ.

Advertisement

ಪ್ರಕರಣ 1: ನೂರು ಕೋಟಿಯ ಸಾಲ

ಮೈಸೂರಿನ ಸಿವಿಲ್ ಎಂಜಿನಿಯರ್ ರಾಜೇಶ್ ಎಂಬುವವರಿಗೆ ನೂರು ಕೋಟಿ ರೂ. ಲೋನ್ ಕೊಡಿಸುವುದಾಗಿ ನಂಬಿಸಲಾಗಿದೆ. ವಿಲ್ಲಾ ಪ್ರಾಜೆಕ್ಟ್ ಗಾಗಿ ಈ ಲೋನ್ ಕೊಡಿಸುವುದಾಗಿ ತಿಳಿಸಲಾಗಿತ್ತು. ಇದಕ್ಕಾಗಿ ಐವರು ಆರೋಪಿಗಳು ಹತ್ತು ಲಕ್ಷ ರೂ. ಪಡೆದುಕೊಂಡಿದ್ದಾರೆ ಎಂದು ರಾಜೇಶ್ ದೂರಿನಲ್ಲಿ ತಿಳಿಸಿದ್ದಾರೆ. ಹಣ ವಾಪಸ್ ಕೇಳಿದಾಗ ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ:ವಾಟ್ಸ್ಯಾಪ್, ಫೇಸ್​ಬುಕ್ ಹಾಗೂ ಇನ್ಸ್ಟಾಗ್ರಾಮ್ ಸ್ಥಗಿತಕ್ಕೆ ಕಾರಣವೇನು ಗೊತ್ತಾ?

ಪ್ರಕರಣ 2: ವಾಟರ್ ಆರ್.ಒ ಪ್ಲಾಂಟ್

Advertisement

106 ವಾಟರ್ ಆರ್.ಒ. ಪ್ಲ್ಯಾಂಟ್ ಕೊಡಿಸುವುದಾಗಿ ಶಿವಮೊಗ್ಗದ ಗುತ್ತಿಗೆದಾರ ಲಕ್ಷ್ಮಣ್ ಎಂಬುವವರಿಗೆ ವಂಚಿಸಲಾಗಿದೆ. ಲಕ್ಷ್ಮಣ್ ಅವರಿಂದ 26.25 ಲಕ್ಷ ರೂ. ಹಣ ಪಡೆದುಕೊಂಡು ವಂಚನೆ ಮಾಡಲಾಗಿದೆ. ಆರ್.ಒ ಪ್ಲ್ಯಾಂಟ್ ಕೊಡಿಸದೆ ಇರುವಾಗ ಹಣ ಕೇಳಿದಾಗ ಲಕ್ಷ್ಮಣ್ ಅವರಿಗೆ ಬೆದರಿಕೆ ಒಡ್ಡಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಐವರ ವಿರುದ್ಧ ಪ್ರಕರಣ

ಎರಡು ಪ್ರಕರಣದಲ್ಲಿ ಐವರು ಆರೋಪಿಗಳು ತಾವು ಸಚಿವ ಈಶ್ವರಪ್ಪ ಅವರ ಆಪ್ತರು ಎಂದು ಬಿಂಬಿಸಿಕೊಂಡಿದ್ದಾರೆ. ಇದನ್ನು ನಂಬಿ ಮೈಸೂರಿನ ರಾಜೇಶ್ ಮತ್ತು ಶಿವಮೊಗ್ಗದ ಲಕ್ಷ್ಮಣ್ ಅವರು ಹಣ ನೀಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಎರಡು ಪ್ರಕರಣದಲ್ಲಿ ವಿಠಲ ರಾವ್, ಮಹೊಮ್ಮದ್ ಮುಫಾಸಿರ್, ಮಂಜುನಾಥ, ಕಾಜಿವಲೀಸ್, ಮೊಹಮ್ಮದ್ ರೆಹಮಾನ್ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿದೆ.

ಶಿವಮೊಗ್ಗದ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next