Advertisement

ಪಡುಬಿದ್ರಿ: ಕಂಚಿನಡ್ಕ ಮಿಂಚಿನಬಾವಿಯಲ್ಲಿ ಗುಳಿಗನ ಕಟ್ಟೆ ನಿರ್ಮಾಣ: ಮತ್ತೆ ಬಿಗುವಿನ ವಾತಾವರಣ

09:57 PM Jun 12, 2022 | Team Udayavani |

ಪಡುಬಿದ್ರಿ ; ಕಂಚಿನಡ್ಕ ಮಿಂಚಿನಬಾವಿ ಕೋಡ್ದಬ್ಬು ದೈವಸ್ಥಾನದಲ್ಲಿ ಮತ್ತೆ ಬಿಗುವಿನ ವಾತಾವರಣ ಸೃಷ್ಟಿಯಾಗಿದೆ.

Advertisement

ರವಿವಾರ ರಾತ್ರಿಯ ವೇಳೆ ಗುಳಿಗನ ಕಟ್ಟೆಯನ್ನು ಸ್ಥಾಪಿಸಿದ ಹಿನ್ನೆಲೆಯಲ್ಲಿ ದಲಿತ ಹಾಗೂ ಮುಸ್ಲಿಂ ಪರ ಸಂಘಟನೆಗಳ ಸದಸ್ಯರು ಸ್ಥಳದಲ್ಲಿ ಜಮಾಯಿಸಿದ್ದು ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಒಂದು ವಾರದ ಹಿಂದೆ ಮಿಂಚಿನಬಾವಿ ಶ್ರೀ ಕೋಡ್ದಬ್ಬು ಸನ್ನಿಧಾನದ ಎದುರು ಪಂಚಾಯತ್ ರಸ್ತೆಗೆ ತಗಡು ಚಪ್ಪರ ಹಾಕುವ ವಿಚಾರದಲ್ಲಿ ಸಾಕಷ್ಟು ವಿವಾದಗಳು ಎದ್ದಿದ್ದು ಕೊನೆಗೆ ಸುಖಾಂತ್ಯ ಕಂಡಿತ್ತು ಆದರೆ ಇಂದು ಸ್ಥಳೀಯ ನಿವಾಸಿಗಳ ಮನೆಯ ಕಾಂಪೌಂಡ್ ಪಕ್ಕದಲ್ಲೇ ಗುಳಿಗನ ಕಟ್ಟೆ ನಿರ್ಮಾಣ ಮಾಡಿದ್ದು ಇದಕ್ಕೆ ಸ್ಥಳೀಯ ನಿವಾಸಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಪಡುಬಿದ್ರಿ ಪೊಲೀಸರು ಸ್ಥಳದಲ್ಲಿದ್ದು ಪರಿಸ್ಥಿತಿಯನ್ನು ನಿಯಂತ್ರಿಸುತ್ತಿದ್ದಾರೆ.

ಇದನ್ನೂ ಓದಿ : ಗಡಿಯಲ್ಲಿನ ಉದ್ವಿಗ್ನತೆಗೆ ಭಾರತವೇ ನೇರ ಹೊಣೆ; ಚೀನದ ವಿದೇಶಾಂಗ ಸಚಿವ ಆರೋಪ

Advertisement
Advertisement

Udayavani is now on Telegram. Click here to join our channel and stay updated with the latest news.

Next