Advertisement

ನಿಸ್ವಾರ್ಥ ಸೇವೆಯಿಂದ ಮನಸ್ಸಿಗೆ ತೃಪ್ತಿ

07:17 AM Jul 22, 2020 | Suhan S |

ವಿಜಯಪುರ: ಜನರ ಕಷ್ಟಕ್ಕೆ ಸ್ಪಂದಿಸುವ ಜತೆ ಮಾಡುವ ಸೇವೆ ನಿಸ್ವಾರ್ಥ ವಾಗಿದ್ದರೆ, ಮನಸ್ಸಿಗೆ ತೃಪ್ತಿ ನೀಡುತ್ತದೆ ಎಂದು ಜಯ ಕರ್ನಾಟಕ ಸಂಘಟನೆ ಅಧ್ಯಕ್ಷ ಡಾ.ಬಿ.ಎನ್‌.ಜಗದೀಶ್‌ ತಿಳಿಸಿದರು.

Advertisement

ಚನ್ನರಾಯಪಟ್ಟಣ ಹೋಬಳಿಯ ರೆಡ್ಡಿಹಳ್ಳಿ ಮಂಜುನಾಥ್‌ ಅವರನ್ನು ಜಯ ಕರ್ನಾಟಕ ಸಂಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಂಘಟನೆ ಕಾರ್ಯದರ್ಶಿಯಾಗಿ ನೇಮಕ ಮಾಡಿದ ಸಂದರ್ಭದಲ್ಲಿ ಮಾತನಾಡಿ, ನಮ್ಮ ಸಂಘಟನೆ ಗ್ರಾಮಸ್ಥರಿಗೆ ಹಾಗೂ ಗ್ರಾಮದ ಅಭಿವೃದ್ಧಿ ಕಾರ್ಯಗಳಿಗೆ ಸದಾ ಸಹಕಾರ ನೀಡುತ್ತದೆ. ಸಂಘಟನೆ ಅನ್ಯಾಯದ ವಿರುದ್ಧ ಹೋರಾಟಕ್ಕೂ ಸಿದ್ಧ. ಅಭಿವೃದ್ಧಿಗೂ ಬದ್ಧ. ಸತತ ಹತ್ತು ವರ್ಷಗಳಿಂದ ಸಂಘಟನೆ ಉತ್ತಮ ರೀತಿಯಲ್ಲಿ ಸಮಾಜಮುಖೀ ಕಾರ್ಯ ಮಾಡುತ್ತಿದೆ. ಈಗಾಗಲೇ 40 ಲಕ್ಷ ಕಾರ್ಯಕರ್ತರನ್ನು ಹೊಂದಿದೆ ಎಂದು ತಿಳಿಸಿದರು.

ರೆಡ್ಡಿಹಳ್ಳಿ ಮಂಜುನಾಥ್‌ ಮಾತನಾಡಿ, ನಾವು ಕನ್ನಡನಾಡು ನುಡಿ, ನೆಲ-ಜಲ, ರೈತಪರ, ವಿದ್ಯಾರ್ಥಿ ಪರ ಹೋರಾಡುತ್ತಿದ್ದು, ಗ್ರಾಮೀಣ ಭಾಗದ ಸಮಸ್ಯೆ ಬಗೆಹರಿಸುವ ಭರವಸೆ ನೀಡುತ್ತೇವೆ ಎಂದು ತಿಳಿಸಿದರು.ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಟಿ.ರವಿ, ಬೆಂಗಳೂರು ನಗರ ಜಿಲ್ಲಾಧ್ಯಕ್ಷ ಡಾ.ಎಂ. ಜಗದೀಶ್‌ ಗೌಡ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next