Advertisement

ಗಣಿ ಇಲಾಖೆ ದಾಳಿ ಅಕ್ರಮ ಮರಳುಗಾರಿಕೆ ನಿರತ 4 ದೋಣಿ ವಶ

02:22 AM Mar 23, 2022 | Team Udayavani |

ಕುಂದಾಪುರ: ತ್ರಾಸಿ ಗ್ರಾಮದ ಅರಮ ದೇವಸ್ಥಾನದ ಹತ್ತಿರ ಸೌಪರ್ಣಿಕಾ ನದಿಯಲ್ಲಿ ಅನಧಿಕೃತ ಮರಳುಗಾರಿಕೆ ನಡೆಯುತ್ತಿರುವ ಬಗ್ಗೆ ಮಾಹಿತಿ ಪಡೆದ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿದ್ದಾರೆ.

Advertisement

ಮರಳು ಗಣಿಗಾರಿಕೆಗೆ ಬಳಸುತ್ತಿದ್ದ 4 ದೋಣಿಗಳು ಹಾಗೂ ಬೈಂದೂರು ತಾಲೂಕಿನ ನಾಡ ಗ್ರಾಮದ ಗುಡ್ಡೆಯಂಗಡಿ ಮೋವಾಡಿ ಸೇತುವೆ ಸಮೀಪ ಅನಧಿಕೃತ ಮರಳು ಗಣಿಗಾರಿಕೆಗೆ ಬಳಸುತ್ತಿದ್ದ 2 ದೋಣಿಗಳನ್ನು ಭೂವಿಜ್ಞಾನಿ ಸಂಧ್ಯಾ ವಶಕ್ಕೆ ಪಡೆದಿರುತ್ತಾರೆ.

ದಾಳಿ ಸಂದರ್ಭ ನಾಡ ಬಡಾಕೆರೆ ವ್ಯಾಪ್ತಿಯ ಕೆಲವು ಕಡೆ ಅನಧಿಕೃತ ಮರಳು ದಂಧೆ ನಡೆಸುವವರು ದೋಣಿಗಳನ್ನು ಹಾಗೂ ಇನ್ನಿತರ ಪರಿಕರಗಳನ್ನು ನೀರಿನಲ್ಲಿ ಮುಳುಗಿಸಿ ಪರಾರಿಯಾಗಿರುವುದು ಕಂಡುಬಂದಿದೆ ಎಂದು ಸಂಧ್ಯಾ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next